ಚಂದ್ರಬಾಬು ನಾಯ್ಡು 
ದೇಶ

ಪಾಪಿಗಳು ಹೆಚ್ಚುತ್ತಿರುವುದರಿಂದ ದೇವಾಲಯಗಳ ಆದಾಯವೂ ಹೆಚ್ಚುತ್ತಿದೆ: ಚಂದ್ರಬಾಬು ನಾಯ್ಡು

ದೇವಾಲಯಗಳ ಆದಾಯಕ್ಕೂ ಪಾಪಿಗಳಿಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಂಬಂಧ ಕಲ್ಪಿಸಿದ್ದು, ಹೆಚ್ಚು ಪಾಪ ಕೃತ್ಯಗಳನ್ನು ಮಾಡುವವರಿಂದ ದೇವಾಲಯಗಳಿಗೆ ಹೆಚ್ಚು ಆದಾಯ ಬರುತ್ತಿದೆ...

ವಿಜಯವಾಡ: ದೇವಾಲಯಗಳ ಆದಾಯಕ್ಕೂ ಪಾಪಿಗಳಿಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಂಬಂಧ ಕಲ್ಪಿಸಿದ್ದು, ಹೆಚ್ಚು ಪಾಪ ಕೃತ್ಯಗಳನ್ನು ಮಾಡುವವರಿಂದ ದೇವಾಲಯಗಳಿಗೆ ಹೆಚ್ಚು ಆದಾಯ ಬರುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಜಯವಾಡದಲ್ಲಿ ಜಿಲ್ಲಾಧಿಕಾರಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ಜನಗಳು ಹೆಚ್ಚು ಪಾಪ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಪರಿಹಾರ ಕಂಡುಕೊಳ್ಳಲು ದೇವಾಲಯಗಳಿಗೆ ಹೆಚ್ಚು ಹಣವನ್ನು ದೇಣಿಗೆ/ ಕಾಣಿಕೆ ರೂಪದಲ್ಲಿ ನೀಡುತ್ತಾರೆ. ಇದರಿಂದ ದೇವಾಲಯಗಳ ಆದಾಯ ಶೇ.27 ರಷ್ಟು ಹೆಚ್ಚಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮದ್ಯ ಮಾರಾಟ ಗಣನೀಯವಾಗಿ ಕುಸಿತ ಕಾಣುತ್ತಿರುವುದರ ಬಗ್ಗೆ ಮಾತನಾಡಿರುವ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಬರಿ ಮಲೈ ದೇವಾಲಯಕ್ಕೆ ಮಾಲೆ ಹಾಕಿಕೊಂಡು ಹೋಗುತ್ತಿದ್ದಾರೆ. ಮಾಲೆ ಧರಿಸಿದ 40 ದಿನಗಳು ಮದ್ಯ ಸೇವನೆ ಬಿಡಬೇಕಿರುವುದರಿಂದ ಮದ್ಯ ಮಾರಾಟದಲ್ಲಿ ಗಣನೀಯ ಕುಸಿತ ಕಂಡುಬಂದಿದ್ದು ರಾಜ್ಯದ ಆದಾಯಕ್ಕೆ ಹೊಡೆತ ಬೀಳುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಜಿಲ್ಲಾಧಿಕಾರಿಗಳಿಗೆ ಹೆಚ್ಚು ಕಾರ್ಯಕ್ಷಮತೆ ಪ್ರದರ್ಶಿಸಲು ಕರೆ ನೀಡಿರುವ ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶ ಎರಡು ವರ್ಷಗಳ ಕೂಸು. ಅದನ್ನು 2029 ರ ವೇಳೆಗೆ ದೇಶದ ನಂ.1 ರಾಜ್ಯವನ್ನಾಗಿಸಬೇಕು ಎಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಜನರಿಗೆ ಶೇ.80 ರಷ್ಟು ತೃಪ್ತಿ ನೀಡುವಂತಹ ಆಡಳಿತ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT