ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ರಾಜನ್ ವಿರುದ್ಧ ವೈಯಕ್ತಿಕ ಟೀಕೆ ಸರಿಯಲ್ಲ: ಅರುಣ್ ಜೇಟ್ಲಿ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯ ಸ್ವಾಮಿ...

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯ ಸ್ವಾಮಿ ಮಾಡುತ್ತಿರುವ ವೈಯಕ್ತಿಕ ಟೀಕೆಗಳನ್ನು ತಾವು ಒಪ್ಪುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಆರ್ ಬಿಐ ಗವರ್ನರ್ ಮಾತ್ರವಲ್ಲದೆ ಯಾರ ವಿರುದ್ಧವೂ ವೈಯಕ್ತಿಕ ಟೀಕೆಗಳನ್ನು ಮಾಡುವುದನ್ನು ನಾನು ಒಪ್ಪುವುದಿಲ್ಲ. ರಿಸರ್ವ್ ಬ್ಯಾಂಕ್ ಒಂದು ಪ್ರಮುಖ ಸಂಸ್ಥೆ. ಅದು ತನ್ನ ನಿರ್ಧಾರಗಳನ್ನು ಮಾಡುತ್ತದೆ. ಆ ನಿರ್ಧಾರಗಳನ್ನು ಕೆಲವರು ಒಪ್ಪಬಹುದು, ಇನ್ನು ಕೆಲವರು ಒಪ್ಪದಿರಬಹುದು, ಆದರೆ ಅದು ಚರ್ಚೆಗೆ ಸಂಬಂಧಪಟ್ಟ ವಿಷಯ ಎಂದು ಜೇಟ್ಲಿ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ತಿಂಗಳು ರಾಜ್ಯಸಭೆಗೆ ಬಿಜೆಪಿಯಿಂದ ನಾಮ ನಿರ್ದೇಶನಗೊಂಡ ಕೂಡಲೇ ರಘುರಾಮ್ ರಾಜನ್ ವಿರುದ್ಧ ಆರೋಪಗಳ ಸುರಿಮಳೆಗೈದು ಅವರನ್ನು ತಕ್ಷಣವೇ ಸೇವೆಯಿಂದ ವಜಾ ಮಾಡುವಂತೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT