ವಿಮಾನಯಾನ ದರ ಏರಿಕೆ ಕಡಿವಾಣಕ್ಕೆ ಶೀಘ್ರವೇ ಕ್ರಮ, ಹೊಸ ನೀತಿ ಘೋಷಣೆ: ಸಚಿವ ಮಹೇಶ್ ಶರ್ಮಾ 
ದೇಶ

ದುಬಾರಿ ವಿಮಾನಯಾನ ದರ ಕಡಿವಾಣಕ್ಕೆ ಶೀಘ್ರವೇ ಹೊಸ ನೀತಿ: ಸಚಿವ ಮಹೇಶ್ ಶರ್ಮಾ

ಹಲವು ತಿಂಗಳ ಚರ್ಚೆಯ ನಂತರ ಕೊನೆಗೂ ಕೇಂದ್ರ ಸರ್ಕಾರ ವಿಮಾನಯಾನ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು ಇದಕ್ಕಾಗಿಯೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

ನವದೆಹಲಿ: ಹಲವು ತಿಂಗಳ ಚರ್ಚೆಯ ನಂತರ ಕೊನೆಗೂ ಕೇಂದ್ರ ಸರ್ಕಾರ ವಿಮಾನಯಾನ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು ಇದಕ್ಕಾಗಿಯೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ.
ಶೀಘ್ರವೇ ಹೊಸ ನಾಗರಿಕ ವಿಮಾನಯಾನ ನೀತಿಗಳನ್ನು ಪ್ರಕಟಿಸಲಿರುವ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ಕ್ರಮ ಕೈಗೊಳ್ಳಲಿದೆ ಎಂದು ಇಲಾಖೆಯ ರಾಜ್ಯ ಸಚಿವ ಮಹೇಶ್ ಶರ್ಮಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.  
ನಾಗರಿಕ ವಿಮಾನಯಾನ ಸಚಿವಾಲಯದ ಬೆಳವಣಿಗೆ ಪ್ರಸ್ತುತ ಶೇ.20 ರಷ್ಟಿದ್ದು ಬೆಳವಣಿಗೆ ದರವನ್ನು ಹೆಚ್ಚಿಸಲು ಹೊಸ ನೀತಿಗಳು ಸಹಕಾರಿಯಾಗಲಿವೆ, ಇನ್ನು ಎರಡು ವಾರಗಳಲ್ಲಿ ಹೊಸ ನೀತಿಯನ್ನು ಸಚಿವ ಸಂಪುಟದ ಮುಂದಿಡಲಾಗುವುದು ಎಂದು ಮಹೇಶ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು 2016 -17 ನೇ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಹೊಸ ವಿಮಾನ ನಿಲ್ದಾಣಗಳಿಗಾಗಿ ಸುಮಾರು 15,000 ಕೋಟಿ ಬಂಡವಾಳ ಹೂಡಲು ನಿರ್ಧರಿಸಿದೆ. ಇನ್ನು ರಜೆ ಹಾಗೂ ವಿಶೇಷ ದಿನಗಳಲ್ಲಿ ವಿಮಾನದರಗಳು ಅತಿಯಾಗಿ ಹೆಚ್ಚಳವಾಗುತ್ತಿದ್ದು ದರ ಏರಿಕೆಗೆ ಕಡಿವಾಣ ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರೂ ಸೂಚಿಸಿದ್ದಾರೆ, ದರ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಮಹೇಶ್ ಶರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT