ಮನೋಹರ್ ಪರಿಕ್ಕರ್ 
ದೇಶ

ಭಾರತೀಯ ಸೇನೆಯ ಮೂರು ದಳಕ್ಕೂ ಶೀಘ್ರದಲ್ಲೆ ಒಬ್ಬನೇ ದಂಡನಾಯಕ!

ಭೂಸೇನೆ, ವಾಯುಸೇನೆ ಹಾಗೂ ನೌಕಾಸೇನೆಗಳಿಗೆ ಒಬ್ಬರೇ ಜನರಲ್ ನೇಮಕಕ್ಕೆ ಕೇಂದ್ರ ಸರ್ಕಾರ ಕಾರ್ಯಪೌರುತ್ತವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ನವದೆಹಲಿ: ಭೂ, ವಾಯು ಹಾಗೂ ನೌಕಾದಳಗಳಿಗೆ ಒಬ್ಬರೇ ಜನರಲ್ ನೇಮಕಕ್ಕೆ ಕೇಂದ್ರ ಸರ್ಕಾರ ಕಾರ್ಯಪೌರುತ್ತವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ರಕ್ಷಣಾ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಮುಂದಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಬಿಜೆಪಿ 2014ರಲ್ಲಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳ ಪೈಕಿ ಒಂದಾಗಿದ್ದ ಭಾರತೀಯ ಸೇನೆಗಳಿಗೆ ಒಬ್ಬರೇ ಜನರಲ್ ಮಾಡುವ ಕುರಿತು ಕ್ರಮಕೈಗೊಂಡಿದೆ.

ನಿವೃತ್ತ ಜನರಲ್ ಶೇಖ್ ಅಥ್ಕರ್ ನೇತೃತ್ವದಲ್ಲಿ 11 ಸದಸ್ಯರುಲ್ಲಾ ಸಮಿತಿಯೊಂದನ್ನು ರಚಿಸಿ ಸಾಧಕ ಬಾಧಕಗಳ ಕುರಿತಂತೆ 90 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗುವುದು. ಆ ವರದಿ ಅನ್ವಯ ಇದೇ ವರ್ಷದಲ್ಲಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಲಿದೆ ಎಂದು ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.

ಕಾರ್ಗಿಲ್ ಯುದ್ಧದ ಬಳಿಕ ಪ್ರಮುಖ ನಿರ್ಧಾರಗಳನ್ನು ತಕ್ಷಣ ತೆಗೆದುಕೊಳ್ಳುವ ಸಲುವಾಗಿ ಭಾರತೀಯ ಮೂರು ಸೇನೆಗಳಿಗೆ ಒಬ್ಬರೇ ಜನರಲ್ ಮಾಡುವ ಕುರಿತಂತೆ ಉನ್ನತ ಸೇನಾಧಿಕಾರಿಯೊಬ್ಬರು ಶಿಫಾರಸ್ಸು ಮಾಡಿದ್ದರು. ಅದರಂತೆ ಬಿಜೆಪಿ ಲೋಕಸಭೆ ಚುನಾವಣೆಗೂ ಮುನ್ನ ತಾನು ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲೂ ಈ ಕುರಿತು ಆಶ್ವಾಸನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT