ಸಿಎಂ ವಿಜಯನ್ ಪ್ರಮಾಣ ವಚನ ಸಮಾರಂಭ 
ದೇಶ

13 ಸಂಖ್ಯೆ ಅಪಶಕುನವಂತೆ: ಕಾರು ಬಳಸಲು ಕೇರಳ ಸಚಿವರುಗಳ ಹಿಂದೇಟು

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿ, ವೈಚಾರಿಕತೆಯ ಹೆಸರಲ್ಲಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳ ಸಚಿವರು, ...

ತಿರುವನಂತಪುರ: ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿ, ವೈಚಾರಿಕತೆಯ ಹೆಸರಲ್ಲಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದ  ಕೇರಳ ಸಚಿವರು,  13ನೇ ನಂಬರ್‌ ಕಾರು ಬಳಸಲು ಹಿಂದೇಟು ಹಾಕುತ್ತಿದ್ದಾರೆ.

ಈಗ 13ನೇ ಸಂಖ್ಯೆ ಅಪಶುಕುನ ಎನ್ನುವ ಕಾರಣಕ್ಕಾಗಿ ಆ ಸಂಖ್ಯೆಯ ಕಾರು ಬಳಸಲು ಹಿಂಜರಿಯುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿಯ ಮುಖಂಡ ಕೆ. ಸುರೇಂದ್ರನ್‌, ಅಪಶಕುನ ಎನ್ನುವ ಕಾರಣಕ್ಕೆ ಕಾರು ಬಳಸದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

ಸಚಿವ ಕೆ.ಟಿ. ಜಲೀಲ್‌ ಅವರ ಕಾರಿನ ಸಂಖ್ಯೆ 12. ಅಂತೆಯೇ ಮತ್ತೊಬ್ಬ ಸಚಿವ ಪಿ. ತಿಲೊತ್ತಮನ್‌ ಅವರ ಕಾರಿನ ಸಂಖ್ಯೆ 14. ಸಚಿವ ಸಂಪುಟದ ಕೊನೆಯ ಸಚಿವರ ಕಾರಿನ ಸಂಖ್ಯೆ 20. ಹಾಗಾದರೆ 13ನೇ ಸಂಖ್ಯೆಯಲ್ಲಿ ಏನು ದೋಷವಿದೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸಿಪಿಐ  ಮತ್ತು ಸಿಪಿಎಂ ಸಚಿವರು 13ನೇ ಸಂಖ್ಯೆಯ ಕಾರನ್ನು ಯಾಕೆ ಹೊರಗಿಡುತ್ತಿದ್ದಾರೆ ಎಂದು ತಿಳಿಯುವ  ಹಕ್ಕು ಜನರಿಗೆ ಇದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರಾದ ಸೀತಾರಾಂ ಯೆಚೂರಿ ಮತ್ತು ಪ್ರಕಾಶ್ ಕಾರಟ್ ಅವರು ಸಮರ್ಪಕವಾಗಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿ.ಎಂ ಪಿ.ವಿಜಯನ್‌ ಅವರಿಗೆ ಧೈರ್ಯವಿದ್ದರೆ 13ನೇ ಸಂಖ್ಯೆ ಅಪಶಕುನ ಎಂದು ಜನರಿಗೆ ಹೇಳಲಿ ಎಂದೂ ಸುರೇಂದ್ರನ್‌ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...

ನಾಡಗೀತೆ: ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ!

ಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!