ಅನುಪಮ್ ಖೇರ್-ನಾಸಿರುದ್ದೀನ್ ಶಾ 
ದೇಶ

ನಾಸಿರುದ್ದೀನ್ ಶಾ, ಅನುಪಮ್ ಖೇರ್ ಮಧ್ಯೆ ಟ್ವಿಟ್ಟರ್ ವಾರ್, ನಂತರ ನಿರಾಕರಣೆ

ಬಾಲಿವುಡ್ ನ ಖ್ಯಾತ ನಟರಾದ ಅನುಪಮ್ ಖೇರ್ ಮತ್ತು ನಾಸಿರುದ್ದೀನ್ ಶಾ ಅವರ ನಡುವೆ ಟ್ವಿಟ್ಟರ್ ವಾರ್ ನಡೆದಿದೆ...

ಮುಂಬೈ: ಬಾಲಿವುಡ್ ನ ಖ್ಯಾತ ನಟರಾದ ಅನುಪಮ್ ಖೇರ್ ಮತ್ತು ನಾಸಿರುದ್ದೀನ್ ಶಾ ಅವರ ನಡುವೆ ಟ್ವಿಟ್ಟರ್ ವಾರ್ ನಡೆದಿದೆ.

ಕಾಶ್ಮೀರ ಪಂಡಿತಕ ಪರವಾಗಿ ಅನುಪಮ್ ಖೇರ್ ಅವರು ಪ್ರಚಾರ ಮಾಡುತ್ತಿರುವುದರ ಹಿಂದಿನ ಉದ್ದೇಶವನ್ನು ನಾಸಿರುದ್ದೀನ್ ಶಾ ಪ್ರಶ್ನಿಸಿದ್ದಾರೆ. ಖೇರ್ ವಿರುದ್ಧ ಟ್ವಿಟ್ಟರ್ ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕಾಶ್ಮೀರದಲ್ಲಿ ಯಾವತ್ತೂ ವಾಸಿಸದೆ ಇದ್ದ ವ್ಯಕ್ತಿಯೊಬ್ಬರು ಕಾಶ್ಮೀರ ಪಂಡಿತರ ಪರವಾಗಿ ಹೋರಾಟ ಆರಂಭಿಸಿದ್ದಾರೆ. ತಕ್ಷಣವೇ ಅವರು ನಿರಾಶ್ರಿತರಾಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ನಾಸಿರುದ್ದೀನ್ ಕೆಣಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅನುಪಮ್ ಖೇರ್, ಶಾ ಅವರೇ ಎಲ್ಲರಿಗೂ ಜಯಕಾರ. ಆ ತರ್ಕದಿಂದ ಅನಿವಾಸಿ ಭಾರತೀಯರು ಭಾರತದ ಬಗ್ಗೆ ಯೋಚಿಸಲೇಬಾರದು ಎಂಬ ಅರ್ಥ ಬರುತ್ತದೆ ಎಂದು ಬರೆದಿದ್ದಾರೆ.

ತಮಗೆ ನಾಸಿರುದ್ದೀನ್ ಶಾ ಅವರ ಬಗ್ಗೆ ಅಪಾರ ಗೌರವವಿದ್ದು, ಅಂತಹ ಸೂಕ್ಷ್ಮ ಹೇಳಿಕೆಗಳನ್ನು ಅವರಿಂದ ನಿರೀಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಹೇಳಿಕೆಯನ್ನು ಶಾ ನೀಡಿದ್ದಾರೆಂದು ನನಗನಿಸುವುದಿಲ್ಲ. ಬೇರೆಯವರು ಇವರ ಹೆಸರಿನಲ್ಲಿ ನೀಡಿದ್ದಾರೆ ಎಂದು ಅನಿಸುತ್ತದೆ. ನನ್ನ ಹುಟ್ಟು ಕಾಶ್ಮೀರದಲ್ಲಿ. ನಾನು ಮೂಲತಃ ಕಾಶ್ಮೀರ ಬ್ರಾಹ್ಮಣ ಎಂದು ದೃಢಪಡಿಸಲು ನಾನು ಇಚ್ಛಿಸುವುದಿಲ್ಲ ಎಂದು ಕೂಡ ಅನುಪಮ್ ಖೇರ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಟ್ವಿಟ್ಟರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ನಾಸಿರುದ್ದೀನ್ ಶಾ, ನಾನು ಆ ರೀತಿ ಹೇಳಿಲ್ಲ. ತಪ್ಪಾಗಿ ವರದಿ ಮಾಡಲಾಗಿದೆ ಎಂದಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಂತರ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಅನುಪಮ್ ಖೇರ್, ನಾನು ನಾಸಿರುದ್ದೀನ್ ಶಾ ಅವರನ್ನು ಸಂಪರ್ಕಿಸಿದ್ದು, ತಾವು ಆ ರೀತಿ ಹೇಳಿಯೇ ಇಲ್ಲ ಎಂದು ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT