ನಿತಿನ್ ಗಡ್ಕರಿ 
ದೇಶ

ದೇಶದಲ್ಲಿವೆ 5 ಕೋಟಿ ನಕಲಿ ಚಾಲನ ಪರವಾನಗಿ: ನಿತಿನ್ ಗಡ್ಕರಿ

ದೇಶದಲ್ಲಿ ಒಟ್ಟು 5 ಕೋಟಿ ಮಂದಿ ನಕಲಿ ಡಿಎಲ್ ಹೊಂದಿದ್ದಾರೆ ಎಂದು ಸರ್ಕಾರದ ಅಧಿಕೃತ ದಾಖಲೆಗಳಿಂದ ತಿಳಿದುಬಂದಿದೆ. ಇಂಥ ನಕಲಿ ಡಿಎಲ್​ಗಳಿಗೆ ...

ನವದೆಹಲಿ: ದೇಶದಲ್ಲಿ ಒಟ್ಟು 5 ಕೋಟಿ ಮಂದಿ ನಕಲಿ ಡಿಎಲ್ ಹೊಂದಿದ್ದಾರೆ ಎಂದು ಸರ್ಕಾರದ ಅಧಿಕೃತ ದಾಖಲೆಗಳಿಂದ ತಿಳಿದುಬಂದಿದೆ. ಇಂಥ ನಕಲಿ ಡಿಎಲ್​ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಾರಿಗೆ ಸಚಿವಾಲಯ ಈಗಾಗಲೇ ವಿಧೇಯಕ ರೂಪಿಸಿದ್ದು, 10,000 ರೂ. ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲು ನಿರ್ಧರಿಸಿದೆ.

ಶೇ. 30 ಡಿಎಲ್​ಗಳು ನಕಲಿಯಾಗಿದ್ದು, ಇದನ್ನು ಮತ್ತೊಮ್ಮೆ ಪರಿಶೀಲಿಸುವ ಅಗತ್ಯವಿದೆ. ಆನ್​ಲೈನ್ ವ್ಯವಸ್ಥೆ ಜಾರಿ ಗೊಳಿಸುವ ಮೂಲಕ ಡಿಎಲ್ ಪಡೆಯಲು ಕಂಪ್ಯೂಟರ್ ಪರೀಕ್ಷೆಯನ್ನು ಅಳವಡಿಸಿಕೊಳ್ಳ ಲಾಗುತ್ತದೆ. ರಾಜಕಾರಣಿ, ಅಧಿಕಾರಿ ಅಥವಾ ಸೆಲೆಬ್ರೆಟಿಗಳೂ ಇದೇ ಮಾದರಿಯಲ್ಲಿ ಪರೀಕ್ಷೆಗೆ ಒಳಗಾಗಿ ಡಿಎಲ್ ಪಡೆಯಬೇಕು. ಇದರಿಂದ ವ್ಯವಸ್ಥೆಯಲ್ಲಿ ಪಾರದರ್ಶಕತೆ ಜಾರಿಗೆ ಬರಲಿದೆ ಎಂದು ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ದೇಶಾದ್ಯಂತ 18 ಕೋಟಿ ಡಿಎಲ್ ವಿತರಿಸಲಾಗಿದ್ದು, ಈ ಪೈಕಿ 5.4 ಕೋಟಿಯನ್ನು ಬೊಗಸ್ ಎಂದು ಪರಿಗಣಿಸಲಾಗಿದೆ. ಹಿಂದಿನ ಸರ್ಕಾರ ನಡೆಸಿದ ಸಮೀಕ್ಷೆ ಪ್ರಕಾರ, ದೇಶದಲ್ಲಿರುವ ಆರು ಕೋಟಿ ಡಿಎಲ್​ಗಳಲ್ಲಿ 74 ಲಕ್ಷ ನಕಲಿ ಎಂದು ಗುರುತಿಸಲಾಗಿತ್ತು.

ರಸ್ತೆ ಸುರಕ್ಷತೆಗೆ ಕಠಿಣ ಕಾಯ್ದೆ: ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ವಿಚಾರವಾಗಿ ರಾಜಸ್ಥಾನದ ಸಾರಿಗೆ ಸಚಿವ ಯೂನೂಸ್ ಖಾನ್ ನೇತೃತ್ವದ ತಂಡ ಪ್ರಾಥಮಿಕ ವರದಿ ಸಲ್ಲಿಸಿದೆ. ಡಿಎಲ್ ಪಡೆಯಲು ಅನರ್ಹ ಗೊಂಡ ವ್ಯಕ್ತಿ ನಕಲಿ ಡಿಎಲ್ ಮಾಡಿಸಿಕೊಂಡು ವಾಹನ ಚಾಲನೆ ಮಾಡುತ್ತಿದ್ದರೆ ಅಂತಹವರಿಗೆ ಒಂದು ವರ್ಷ ಶಿಕ್ಷೆ ಜತೆಗೆ 10 ಸಾವಿರ ದಂಡ ವಿಧಿಸುವಂತೆ ಪ್ರಾಥಮಿಕ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಮುಂದಿನ ತಿಂಗಳು ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಸಂಸತ್​ನಲ್ಲಿ ಮಂಡಿಸಲಾಗುವುದು ಎಂದು ಗಡ್ಕರಿ ಹೇಳಿದ್ದಾರೆ.

ಡಿಎಲ್ ವ್ಯವಸ್ಥೆ ಯನ್ನು ಕಂಪ್ಯೂಟರೀಕರಣಗೊಳಿಸುವ ಜತೆಗೆ ದೇಶಾದ್ಯಂತ ಹೊಸತಾಗಿ 5 ಸಾವಿರ ಡ್ರೈವಿಂಗ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ. ಇಲಾಖೆಯಲ್ಲಿ ಪಾರದರ್ಶಕತೆ ಜಾರಿಗೆ ತರಲು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿರುವ ‘ಸ್ಥಾಪಿತ ಹಿತಾಸಕ್ತಿ’ಗಳು ಅಡ್ಡಪಡಿಸುತ್ತಿವೆ ಎಂದು ಗಡ್ಕರಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT