ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ 
ದೇಶ

ದಲಿತರ ಜೊತೆ ಭೋಜನ: ಅಮಿತ್ ಷಾ ಜಾತಿ ತಾರತಮ್ಯ ಮಾಡುತ್ತಿದ್ದಾರೆ- ಅಖಿಲೇಶ್

ವಾರಣಾಸಿಯಲ್ಲಿ ದಲಿತ ಕುಟುಂಬದವರ ಜೊತೆ ಭೋಜನ ಸವಿಯುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕ್ರಮವನ್ನು...

ಲಕ್ನೋ: ವಾರಣಾಸಿಯಲ್ಲಿ ದಲಿತ ಕುಟುಂಬದವರ ಜೊತೆ ಭೋಜನ ಸವಿಯುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕ್ರಮವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಟೀಕಿಸಿದ್ದಾರೆ. ಅಮಿತ್ ಶಾ ಅವರು ಜಾತಿ ತಾರತಮ್ಯ ಮಾಡುತ್ತಿದ್ದು, ಮುಂದಿನ ವರ್ಷದ ವಿಧಾನಸಭೆ ಚುನಾವಣೆಯ ಮೇಲೆ ಕಣ್ಣಿಟ್ಟು ದಲಿತರನ್ನು ಓಲೈಸಲು ಹೊರಟಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮ್ಮ ಪಕ್ಷ ರಾಜ್ಯದಲ್ಲಿ ಮಾಡಿರುವ ಕೆಲಸ, ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಮತಯಾಚನೆ ಮಾಡುತ್ತದೆ. ಇತ್ತೀಚೆಗೆ ನಾನು ಕೂಡ ಕಾರ್ಮಿಕರೊಂದಿಗೆ ಭೋಜನ ಸವಿದಿದ್ದೆ. ಆದರೆ ಜಾತಿಯಾಧಾರದಲ್ಲಿ ತಾರತಮ್ಯ ಮಾಡಿಲ್ಲ. ನಿಮ್ಮಲ್ಲಿ ಭಾವಚಿತ್ರವಿದ್ದರೆ ನೀವು ಕಂಡುಹಿಡಿಯಿರಿ, ಅಂದು ನನ್ನ ಪಕ್ಕ ಕುಳಿತು ಭೋಜನ ಸವಿದ ಕಾರ್ಮಿಕರು ಯಾವ ಜಾತಿಗೆ ಸೇರಿದವರೆಂದು ಎಂದು ಸುದ್ದಿಗಾರರಲ್ಲಿ ಮಾತನಾಡುತ್ತಾ ಹೇಳಿದರು.

ಅಂದು ನನ್ನ ಜೊತೆ ಕುಳಿತು ಊಟ ಮಾಡಿದ ಕಾರ್ಮಿಕರು ಮಿನರಲ್ ನೀರು ಕುಡಿಯುವುದು, ಮಟನ್, ಚಿಕನ್ ತಿನ್ನುವುದನ್ನು ತೋರಿಸಿದ್ದಕ್ಕೆ ಮಾಧ್ಯಮದವರಿಗೆ ಧನ್ಯವಾದಗಳು. ಜಾತಿ, ಮತದ ಆಧಾರದಲ್ಲಿ ನಾವು ವಿಷಯಗಳನ್ನು ನೋಡುವುದಿಲ್ಲ. ಕೆಲಸ, ಸಾಧನೆಯಿಂದ ಜನರ ಮನಸ್ಸನ್ನು ಗೆಲ್ಲಬೇಕು ಎಂದು ಅಖಿಲೇಶ್ ಯಾದವ್ ಹೇಳಿದರು.

ಅಮಿತ್ ಶಾ ಇಂದು, ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ದಲಿತರಾದ ಗಿರಿಜಾ ಪ್ರಸಾದ್ ಬಿಂದ್ ಮತ್ತು ಇಕ್ಬಾಲ್ ಬಿಂದ್ ಅವರ ಮನೆಯಲ್ಲಿ ಭೋಜನ ಸವಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT