ನರೇಂದ್ರ ಮೋದಿ ಮತ್ತು ಸೋನಿಯಾ ಗಾಂಧಿ 
ದೇಶ

ನರೇಂದ್ರ ಮೋದಿ ಪ್ರಧಾನಿಯಷ್ಟೇ, ಶೆಹನ್ ಶಾ ಅಲ್ಲ: ಸೋನಿಯಾ ಗಾಂಧಿ

ತಮ್ಮ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಎನ್ ಡಿ ಎ ಸರ್ಕಾರ ಮಾಡುತ್ತಿರುವ ಆರೋಪಗಳೆಲ್ಲಾ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ನಡೆಯುತ್ತಿರುವ ಷಡ್ಯಂತ್ರ ...

ರಾಯ್ ಬರೇಲಿ: ತಮ್ಮ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಎನ್ ಡಿ ಎ ಸರ್ಕಾರ ಮಾಡುತ್ತಿರುವ ಆರೋಪಗಳೆಲ್ಲಾ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ನಡೆಯುತ್ತಿರುವ ಷಡ್ಯಂತ್ರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಬರ ತಾಂಡವವಾಡುತ್ತಿದೆ. ರೈತರು ಸಮಸ್ಯೆಯಲ್ಲಿದ್ದಾರೆ, ಹೀಗಿದ್ದರೂ ಎನ್ ಡಿ ಎ ಸರ್ಕಾರ ಶೋ ತೋರಿಸುತ್ತಿದ, ನಾನು ಈ ರೀತಿಯ ವ್ಯಕ್ತಿಯನ್ನು ಎಲ್ಲಿಯೂ ನೋಡಿಲ್ಲ, ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಅಷ್ಟೇ, ಅವರು ಶೆಹನ್ ಷಾ ಅಲ್ಲ ಎಂದು ಟೀಕಿಸಿದ್ದಾರೆ.

ಎನ್ ಡಿಎ ಸರ್ಕಾರ ಪ್ರತಿದಿನ ಆರೋಪ ಮಾಡುವುದನ್ನೇ ಕೆಲಸ ಮಾಡಿಕೊಂಡಿದೆ. ತಪ್ಪು ಆರೋಪಗಳನ್ನು ಮಾಡಿ ಕ್ಷಮೆ ಕೇಳುತ್ತಿದೆ. ಒಂದು ವೇಳೆ ಅವರು ಮಾಡಿರುವ ಆರೋಪದಲ್ಲಿ ಹುರುಳಿದ್ದರೇ ಪ್ರಕರಣದ ಬಗ್ಗೆ ಮುಕ್ತ ಹಾಗೂ ಪಾರದರ್ಶಕ ತನಿಖೆ ನಡೆಸಲಿ ಆಗ, ಸತ್ಯ ಹೊರಬರುತ್ತದೆ ಎಂದು ಆಗ್ರಹಿಸಿದ್ದಾರೆ.

ಇನ್ನೂ ಸೋನಿಯಾ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸಂಬಿತ್ ಪತ್, ಬಡ ವ್ಯಕ್ತಿಯೊಬ್ಬ ದೇಶದ ಪ್ರಧಾನಿಯಾಗಿರುವುದನ್ನು ಕುಟುಂಬ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT