ಹರೀಶ್ ರಾವತ್ 
ದೇಶ

ಉತ್ತರಾಖಂಡ್ ಕುಟುಕು ಕಾರ್ಯಾಚರಣೆ: ಸಿಎಂ ಹರೀಶ್ ರಾವತ್ ಬಂಧನಕ್ಕೆ ಹೈಕೋರ್ಟ್ ತಡೆ

ವಿವಾದಿತ ಕುಟುಕು ಕಾರ್ಯಾಚರಣೆ ಕುರಿತ ವಿಡಿಯೋ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ್ ಹೈಕೋರ್ಟ್ ಮುಖ್ಯಮಂತ್ರಿ ಹರೀಶ್ ರಾವತ್...

ನೈನಿತಾಲ್: ವಿವಾದಿತ ಕುಟುಕು ಕಾರ್ಯಾಚರಣೆ ಕುರಿತ ವಿಡಿಯೋ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ್ ಹೈಕೋರ್ಟ್ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಬಂಧನಕ್ಕೆ ಮಂಗಳವಾರ ತಡೆಯಾಜ್ಞೆ ನೀಡಿದೆ.
ಕುಟುಕು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಳೆದ ವಾರ ಸಿಬಿಐ ಹರೀಶ್ ರಾವತ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ತಮ್ಮ ವಿರುದ್ಧದ ಸಿಬಿಐ ತನಿಖೆಗೆ ಹಾಗೂ ಬಂಧನಕ್ಕೆ ತಡೆ ಕೋರಿ ರಾವತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಬಂಧನಕ್ಕೆ ತಡೆ ನೀಡಿದೆ. ಆದರೆ ಸಿಬಿಐ ತನಿಖೆಗೆ ತಡೆ ನೀಡಲು ನಿರಾಕರಿಸಿದೆ.
ಖಾಸಗಿ ಸುದ್ದಿವಾಹಿನಿಯ ಮುಖ್ಯ ಸಂಪಾದಕರು ನಡೆಸಿದ್ದ ಈ ಕುಟುಕು ಕಾರ್ಯಾಚರಣೆಯ ಸಿಡಿಯನ್ನು, 9 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಪ್ರದರ್ಶಿಸಿದ್ದರು. ಅಲ್ಲದೆ ಹರೀಶ್ ರಾವತ್ ಅವರು ಬಂಡಾಯ ಶಾಸಕರ ಬೆಂಬಲ ಗಳಿಸಲು ಪತ್ರಕರ್ತನ ಜೊತೆಗೆ ಹಣಕಾಸು ವ್ಯವಹಾರ ನಡೆಸಿದ್ದನ್ನು ಸಿಡಿಯಲ್ಲಿ ತೋರಿಸಲಾಗಿತ್ತು. ಆದರೆ ಬಂಡಾಯ ಶಾಸಕರು ಬಹಿರಂಗಪಡಿಸಿದ ಕುಟುಕು ಕಾರ್ಯಾಚರಣೆಯ ವಿಡಿಯೋ ನಕಲಿ ಮತ್ತು ರಾಜಕೀಯ ಪಿತೂರಿ ಎಂದು ರಾವತ್ ಹೇಳಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT