ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ 
ದೇಶ

ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಭಯೋತ್ಪಾದನೆ ಆರೋಪ ಆತಂಕಕಾರಿ ವಿಷಯ: ಕಾನೂನು ಸಚಿವ ಡಿವಿಎಸ್

ಭಯೋತ್ಪಾದನೆ ಕುರಿತಾಗಿ ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಪ್ರಕರಣ ದಾಖಲಾಗುತ್ತಿರುವ ಘಟನೆಗಳ ಬಗ್ಗೆ ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಅಲೀಘರ್: ಭಯೋತ್ಪಾದನೆ ಕುರಿತಾಗಿ ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಪ್ರಕರಣ ದಾಖಲಾಗುತ್ತಿರುವ ಘಟನೆಗಳ ಬಗ್ಗೆ ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಎರಡನೇ ವರ್ಷಾಚರಣೆ ಅಂಗವಾಗಿ ಉತ್ತರ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದ್ದ  ವಿಕಾಸ್ ಪರ್ವ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸದಾನಂದ ಗೌಡ, ಮುಸ್ಲಿಂ ಯುವಕರ ವಿರುದ್ಧ ಭಯೋತ್ಪಾದನೆ ಕುರಿತು ಸುಳ್ಳು ಪ್ರಕರಣ ದಾಖಲಿಸುತ್ತಿರುವ ಘಟನೆಗಳ ಬಗ್ಗೆ ಗಮನ ಹರಿಸಲು ಕಾನೂನು ಸುಧಾರಣೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.
ಭಯೋತ್ಪಾದನೆ ಕುರಿತಾಗಿ ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಪ್ರಕರಣಗಳು ದಾಖಲಾಗುತ್ತಿರುವುದು ಹಾಗೂ ಅವರನ್ನು ಅಮಾಯಕರೆಂದು ಸಾಬೀತಾದ ನಂತರ ಆರೋಪಮುಕ್ತರನ್ನಾಗಿ ಬಿಡುಗಡೆ ಮಾಡಲಾಗುತ್ತಿರುವ ಘಟನೆಗಳು ಆತಂಕಕಾರಿ ವಿಷಯ. ಕಾನೂನು ಸಚಿವಾಲಯ ಕಾನೂನಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೇ ಕಾನೂನಿನಲ್ಲಿ ಮಾರ್ಪಾಡು ಮಾಡುವುದಕ್ಕೆ ಸಂಬಂಧಿಸಿದಂತೆ ವರದಿಗಳನ್ನು ತಯಾರಿಸಲು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ