ಸಾಂದರ್ಭಿಕ ಚಿತ್ರ 
ದೇಶ

ಭಾರತ ತೊರೆದ ಪಾಕ್ ರಾಯಭಾರ ಕಚೇರಿಯ ಆರು ಅಧಿಕಾರಿಗಳು

ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿ ಬೇಹುಗಾರಿಕೆ ಸುಳಿಯಲ್ಲಿ ಸಿಲುಕಿದ ನಂತರ ಉಭಯ ದೇಶಗಳ ನಡುವೆ...

ನವದೆಹಲಿ: ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿ ಬೇಹುಗಾರಿಕೆ ಸುಳಿಯಲ್ಲಿ ಸಿಲುಕಿದ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿರುವ ಪಾಕ್ ರಾಯಭಾರ ಕಚೇರಿಯ ಆರು ಅಧಿಕಾರಿಗಳು ಬುಧವಾರ ಭಾರತ ಬಿಟ್ಟು ಸ್ವದೇಶಕ್ಕೆ ಮರಳಿದ್ದಾರೆ.
ಒಟ್ಟು ಎಷ್ಟು ಅಧಿಕಾರಿಗಳು ಭಾರತ ತೊರೆದಿದ್ದಾರೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ ಪಾಕ್ ಹೈಕಮಿಷನ್ ಮೂಲಗಳ ಪ್ರಕಾರ, ಆರು ಅಧಿಕಾರಿಗಳು ದೆಹಲಿಯಿಂದ ಸ್ವದೇಶಕ್ಕೆ ಮರಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದ ಅಧಿಕಾರಿಗಳು ನಮಗೆ ಬೆದರಿಕೆ ಹಾಕುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಭಾರತದಲ್ಲಿದ್ದು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ,
ಪಾಕ್ ರಾಯಭಾರ ಕಚೇರಿಯ ವಾಣಿಜ್ಯ ಕೌನ್ಸಿಲರ್ ಸೈಯಿದ್ ಫಾರುಖ್ ಹಬಿಬ್ ಮತ್ತು ಕಾರ್ಯದರ್ಶಿಗಳಾದ ಖಾದಿಮ್ ಹುಸೇನ್, ಮುದಸ್ಸಿರ್ ಚೀಮಾ ಹಾಗೂ ಶಾಹೀದ್ ಇಖ್ಬಾಲ್ ಅವರು ಪಾಕಿಸ್ತಾನಕ್ಕೆ ಮರಳಿದ್ದಾರೆ ಎನ್ನಲಾಗಿದೆ.
ಬೇಹುಗಾರಿಕೆ ಆರೋಪದ ಮೇಲೆ ಪಾಕ್ ರಾಯಭಾರಿ ಕಚೇರಿಯ ಬಂಧಿತ ಮೊಹಮದ್‌ ಅಖ್ತರ್‌ ಉಚ್ಛಾಟನೆಗೊಂಡ ಬೆನ್ನಲ್ಲೇ ಪಾಕಿಸ್ತಾನ ಇನ್ನೂ ಆರು ಅಧಿಕಾರಿಗಳನ್ನು ಭಾರತದಿಂದ ವಾಪಸ್ ಕರೆಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT