ಭೋಪಾಲ್ ಎನ್'ಕೌಂಟರ್ 
ದೇಶ

ಭೋಪಾಲ್ ಎನ್'ಕೌಂಟರ್: 2 ವಾರಗಳೊಗಾಗಿ ವರದಿ ಸಲ್ಲಿಸಿ ಎಟಿಎಸ್'ಗೆ ಮ.ಪ್ರ ಹೈಕೋರ್ಟ್ ಸೂಚನೆ

ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣ ಕುರಿತಂತೆ 2 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಉಗ್ರ ನಿಗ್ರಹ ತಂಡಕ್ಕೆ ಮಧ್ಯಪ್ರದೇಶ...

ಜಬಲ್ಪುರ: ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣ ಕುರಿತಂತೆ 2 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಉಗ್ರ ನಿಗ್ರಹ ತಂಡಕ್ಕೆ ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.

ಬಂಧನಕ್ಕೊಳಗಾಗಿದ್ದ 8 ಸಿಮಿ ಉಗ್ರರು ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಕೆಲವರಿಗೆ ಜಾಮೀನು ದೊರೆತಿತ್ತು. ಈ ಬೆಳವಣಿಗೆಗಳ ಮಧ್ಯೆಯೇ ಆರೋಪಿಗಳನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು.

ಎನ್ ಕೌಂಟರ್ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಕೆಲವರ ಜಾಮೀನು ಅರ್ಜಿ ವಿಚಾರಣೆ ಇನ್ನೂ ಬಾಕಿ ಉಳಿದಿತ್ತು. ಹೀಗಾಗಿ ಎನ್ ಕೌಂಟರ್ ಕುರಿತಂತೆ ವಿವರಣಾತ್ಮಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿತ್ತು ಎಂದು ಪರ ವಕೀಲ ನಯೀಮ್ ಖಾನ್ ಅವರು ಹೇಳಿದ್ದಾರೆ.

ಇದರಂತೆ ಇಂದು ವಿಚಾರಣೆ ನಡೆಸಿರುವ ಮಧ್ಯಪ್ರದೇಶ ನ್ಯಾಯಾಲಯವು ಉಗ್ರ ನಿಗ್ರಹ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, 2 ವಾರಗಳೊಳಗಾಗಿ ಎನ್ ಕೌಂಟರ್ ಕುರಿತಂತೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಹೇಳಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT