ಭೋಪಾಲ್ ಎನ್'ಕೌಂಟರ್ 
ದೇಶ

ಭೋಪಾಲ್ ಎನ್'ಕೌಂಟರ್: 2 ವಾರಗಳೊಗಾಗಿ ವರದಿ ಸಲ್ಲಿಸಿ ಎಟಿಎಸ್'ಗೆ ಮ.ಪ್ರ ಹೈಕೋರ್ಟ್ ಸೂಚನೆ

ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣ ಕುರಿತಂತೆ 2 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಉಗ್ರ ನಿಗ್ರಹ ತಂಡಕ್ಕೆ ಮಧ್ಯಪ್ರದೇಶ...

ಜಬಲ್ಪುರ: ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣ ಕುರಿತಂತೆ 2 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಉಗ್ರ ನಿಗ್ರಹ ತಂಡಕ್ಕೆ ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.

ಬಂಧನಕ್ಕೊಳಗಾಗಿದ್ದ 8 ಸಿಮಿ ಉಗ್ರರು ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಕೆಲವರಿಗೆ ಜಾಮೀನು ದೊರೆತಿತ್ತು. ಈ ಬೆಳವಣಿಗೆಗಳ ಮಧ್ಯೆಯೇ ಆರೋಪಿಗಳನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು.

ಎನ್ ಕೌಂಟರ್ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಕೆಲವರ ಜಾಮೀನು ಅರ್ಜಿ ವಿಚಾರಣೆ ಇನ್ನೂ ಬಾಕಿ ಉಳಿದಿತ್ತು. ಹೀಗಾಗಿ ಎನ್ ಕೌಂಟರ್ ಕುರಿತಂತೆ ವಿವರಣಾತ್ಮಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿತ್ತು ಎಂದು ಪರ ವಕೀಲ ನಯೀಮ್ ಖಾನ್ ಅವರು ಹೇಳಿದ್ದಾರೆ.

ಇದರಂತೆ ಇಂದು ವಿಚಾರಣೆ ನಡೆಸಿರುವ ಮಧ್ಯಪ್ರದೇಶ ನ್ಯಾಯಾಲಯವು ಉಗ್ರ ನಿಗ್ರಹ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, 2 ವಾರಗಳೊಳಗಾಗಿ ಎನ್ ಕೌಂಟರ್ ಕುರಿತಂತೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಹೇಳಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT