ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ: ಮೃತ ಮಾಜಿ ಯೋಧನ ಪುತ್ರ 
ದೇಶ

ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ: ಮೃತ ಮಾಜಿ ಯೋಧನ ಪುತ್ರ

ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ...

ನವದೆಹಲಿ: ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು ಗುರುವಾರ ಹೇಳಿದ್ದಾರೆ.

ಈ ಹಿಂದಷ್ಟೇ ರಾಮ್ ಕಿಶನ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡ ಯೋಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು, ರಾಷ್ಟ್ರೀಯ ಚುನಾವಣೆಗಳಿಗೂ ಪಂಚಾಯಿತಿ ಚುನಾವಣೆಗೂ ಸಾಕಷ್ಟು ವ್ಯತ್ಯಾಸಗಳಿವೆ. ನನ್ನ ತಂದೆ ಯಾವುದೇ ಪಕ್ಷಕ್ಕೂ ಸೇರಿರಲಿಲ್ಲ. ನನ್ನ ತಂದೆ ಜನರಿಗಾಗಿ ಕೆಲಸವನ್ನು ಮಾಡುತ್ತಿದ್ದರು. ನನ್ನ ತಂದೆ ಕುಟುಂಬಕ್ಕಾಗಿ ಅಲ್ಲದೆ, ಅವರ ಸಹೋದ್ಯೋಗಿಗಳಿಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT