ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ: ಮೃತ ಮಾಜಿ ಯೋಧನ ಪುತ್ರ 
ದೇಶ

ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ: ಮೃತ ಮಾಜಿ ಯೋಧನ ಪುತ್ರ

ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ...

ನವದೆಹಲಿ: ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು ಗುರುವಾರ ಹೇಳಿದ್ದಾರೆ.

ಈ ಹಿಂದಷ್ಟೇ ರಾಮ್ ಕಿಶನ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡ ಯೋಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು, ರಾಷ್ಟ್ರೀಯ ಚುನಾವಣೆಗಳಿಗೂ ಪಂಚಾಯಿತಿ ಚುನಾವಣೆಗೂ ಸಾಕಷ್ಟು ವ್ಯತ್ಯಾಸಗಳಿವೆ. ನನ್ನ ತಂದೆ ಯಾವುದೇ ಪಕ್ಷಕ್ಕೂ ಸೇರಿರಲಿಲ್ಲ. ನನ್ನ ತಂದೆ ಜನರಿಗಾಗಿ ಕೆಲಸವನ್ನು ಮಾಡುತ್ತಿದ್ದರು. ನನ್ನ ತಂದೆ ಕುಟುಂಬಕ್ಕಾಗಿ ಅಲ್ಲದೆ, ಅವರ ಸಹೋದ್ಯೋಗಿಗಳಿಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT