ಸಾಂದರ್ಭಿಕ ಚಿತ್ರ 
ದೇಶ

ನಿನಗೆ ಹೆಚ್ಚು ಖುಷಿ ಕೊಟ್ಟಿದ್ದು ಯಾರು...?: ಅತ್ಯಾಚಾರ ಸಂತ್ರಸ್ತೆಗೆ ಕೇರಳ ಪೊಲೀಸರ ಅಸಭ್ಯ ಪ್ರಶ್ನೆ!

ಪತಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದ ಅತ್ಯಾಚಾರ ಸಂತ್ರಸ್ತೆ ಮಹಿಳೆಯೊಬ್ಬರೊಂದಿಗೆ ಪೊಲೀಸರು ಅಸಭ್ಯವಾಗಿ ಪ್ರಶ್ನೆಗಳನ್ನು ಕೇಳಿರುವ ಘಟನೆಯೊಂದು...

ತಿರುವನಂತಪುರ: ಪತಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದ ಅತ್ಯಾಚಾರ ಸಂತ್ರಸ್ತೆ ಮಹಿಳೆಯೊಬ್ಬರೊಂದಿಗೆ ಪೊಲೀಸರು ಅಸಭ್ಯವಾಗಿ ಪ್ರಶ್ನೆಗಳನ್ನು ಕೇಳಿರುವ ಘಟನೆಯೊಂದು ಕೇರಳದಲ್ಲಿ ನಡೆದಿದೆ.

ಈ ಬಗ್ಗೆ ಖ್ಯಾತ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಪತಿಯ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಲು ಹೋದಾಗ ಆಕೆಯ ನೋವಿಗೆ ಸ್ಪಂದಿಸುವುದನ್ನು ಬಿಟ್ಟು, ಪೊಲೀಸರೇ ಅಸಭ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆಂದು ಹೇಳಿಕೊಂಡಿದ್ದಾರೆ.

ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆಯ ಬಳಿ ಪೊಲೀಸರು ನಿನಗೆ ಹೆಚ್ಚು ಖುಷಿ ಕೊಟ್ಟವರು ಯಾರು? ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ. ಪೊಲೀಸರ ಈ ಅಸಭ್ಯ ವರ್ತನೆ ಹಾಗೂ ಪ್ರಶ್ನೆಗಳಿಗೆ ಸಹಿಸಲು ಸಾಧ್ಯವಾಗದೆಯೇ ಮಹಿಳೆ ದೂರನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

ನಾನು ಹೇಳುತ್ತಿರುವುದು ಸಿನಿಮಾ ಕಥೆಯಲ್ಲ. ನಿಜವಾಗಿಯೂ ನಡೆದ ಘಟನೆಯಾಗಿದೆ. ನನಗೆ ಕರೆ ಮಾಡಿದ ಮಹಿಳೆಯೊಬ್ಬರು ಸುಮ್ಮನೆ ಅಳುತ್ತಿದ್ದರು. ನೀವು ಯಾರು ಎಂದು ಕೇಳಿದಾಗ ನಿಮ್ಮನ್ನು ಭೇಟಿಯಾಗಬೇಕಿದೆ ಎಂದು ಹೇಳಿದರು. ಮಹಿಳೆಗೆ 35 ವರ್ಷ ವಯಸ್ಸಾಗಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದಾರೆ.

ಮಹಿಳೆಯೊಂದಿಗೆ ಮಾತನಾಡಿದಾಗ ಕೆಲ ತಿಂಗಳ ಹಿಂದೆ ನನ್ನ ಪತಿ ಮನೆಯಲ್ಲಿ ಇರಲಿಲ್ಲ. ಈ ಸಮಯ ನೋಡಿಕೊಂಡು ಪತಿಯ ನಾಲ್ಕು ಜನ ಸ್ನೇಹಿತರು ಮನೆಗೆ ಬಂದಿದ್ದರು. ಈ ವೇಳೆ ಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು. ಈ ವೇಳೆ ಹಿಂದೂ ಮುಂದೂ ತೋಚದೆಯೇ ಅವರೊಂದಿಗೆ ಹೋಗಿದ್ದೆ. ಕಾರಿನಲ್ಲಿ ಕರೆದುಕೊಂಡ ಅವರು, ಆಸ್ಪತ್ರೆಗೆ ಹೋಗುವ ಬದಲಾಗಿ ನಿರ್ಜನ ಪ್ರದೇಶಕ್ಕೆ ನನ್ನನ್ನು ಕರೆದುಕೊಂಡು ಹೋದರು. ನಂತರ ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದರು. ನನ್ನ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಪೈಕಿ ಓರ್ವ ರಾಜಕೀಯ ಪಕ್ಷವೊಂದರಲ್ಲಿ ಉನ್ನತ ಹುದ್ದೆಯಲ್ಲಿದ್ದಾನೆಂದು ಹೇಳಿದರು.

ಅತ್ಯಾಚಾರ ಮಾಡಿದ ಘಟನೆಯನ್ನು ವಿಡಿಯೋ ಮಾಡಿಕೊಳ್ಳಲಾಗಿದ್ದು, ವಿಚಾರವನ್ನು ಯಾರಿಗಾದರು ಹೇಳಿದರೆ, ವಿಡಿಯೋವನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಲಾಗುತ್ತದೆ ಎಂದು ಹೇಳಿದರು, ನನ್ನ ವರ್ತನೆಯಲ್ಲಿ ಬದಲಾವಣೆಗಳು ಕಂಡ ಬಂದ ಕಾರಣ ಪತಿಗೆ ಅನುಮಾನ ಬಂದಿತ್ತು. ಈ ವೇಳೆ ಅವರಿಗೆ ನಡೆದ ಘಟನೆಯನ್ನು ವಿವರಿಸಿದ್ದೆ. ಪೊಲೀಸ್ ಠಾಣೆಗೆ ಹೋದಾಗ ಠಾಣೆಯಲ್ಲಿದ್ದ ಪೊಲೀಸರು ಅಸಭ್ಯವಾದ ಪ್ರಶ್ನೆಗಳನ್ನು ಕೇಳಿದರು. ನಂತರ ಅನಿವಾರ್ಯವಾಗಿ ದೂರನ್ನು ಹಿಂಪಡೆಯುವಂತೆ ಆಯಿತು ಎಂದು ಮಹಿಳೆ ಹೇಳಿಕೊಂಡಿದ್ದಾರೆಂದು ಭಾಗ್ಯಲಕ್ಷ್ಮಿ ಹೇಳಿದ್ದಾರೆ.

ನಾನು ಬರೆದಿರುವ ಪ್ರತೀಯೊಂದು ಪದಕ್ಕೂ ನಾನು ಬದ್ಧಳಾಗಿದ್ದೇನೆ. ಇದರಲ್ಲಿ ಯಾವುದೇ ಕಟ್ಟುಕಥೆಗಳಿಲ್ಲ ಎಂದು ಭಾಗ್ಯಲಕ್ಷ್ಮಿ ಅವರು ಹೇಳಿದ್ದಾರೆ. ಭಾಗ್ಯಲಕ್ಷ್ಮಿ ಅವರು ಹಾಕಿರುವ ಈ ಪೋಸ್ಟ್ ನ್ನು ಸಾಕಷ್ಟು ಜನರು ಶೇರ್ ಮಾಡಿದ್ದು, ಪ್ರಕರಣ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.

ಪ್ರಕರಣ ಸಂಬಂಧ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಪತಿ ಸುದ್ದಿಗೋಷ್ಟಿಯೊಂದನ್ನು ನಡೆಸಿದ್ದು, ಮುಖಗಳನ್ನು ಮುಚ್ಚಿಕೊಂಡು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಪೊಲೀಸರು ತನಗೆ ಅಸಭ್ಯವಾದ ಪ್ರಶ್ನೆಗಳನ್ನು ಕೇಳಿದ್ದರು. ಇನ್ನಷ್ಟು ಅವಮಾನಗೊಳ್ಳಲು ನಮಗೆ ಇಷ್ಟವಿರಲಿಲ್ಲ. ಅತ್ಯಾಚಾರದಿಂದ ಆದ ಅವಮಾನಕ್ಕಿಂತ ಪೊಲೀಸರ ಬೆದರಿಕೆಗಳು ಹಾಗೂ ಅವರ ಅಸಭ್ಯವಾದ ಪ್ರಶ್ನೆಗಳು ನಮಗೆ ನಮಗೆ ಹೆಚ್ಚು ಅವಮಾನವಾಗುವಂತೆ ಮಾಡಿತ್ತು. ಹೀಗಾಗಿ ದೂರನ್ನು ಹಿಂದಕ್ಕೆ ತೆಗೆದುಕೊಂಡಿದ್ದೆವು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

Iran-Israel War: ಗಲ್ಫ್ ವಾಯುಪ್ರದೇಶ ಸಂಚಾರ ತಪ್ಪಿಸಿ; ವಿಮಾನಯಾನ ಸಂಸ್ಥೆಗಳಿಗೆ DGCA ಎಚ್ಚರಿಕೆ

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

SCROLL FOR NEXT