ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಸುದ್ದಿ ವಾಹಿನಿ ಮೇಲಿನ ನಿಷೇಧದಿಂದ ತುರ್ತು ಪರಿಸ್ಥಿತಿ ಮರುಕಳಿಸಿದಂತಾಗಿದೆ: ಮಮತಾ ಬ್ಯಾನರ್ಜಿ

ತುರ್ತುಪರಿಸ್ಥಿಯ ಬಳಿಕ ಇದೇ ಮೊದಲ ಬಾರಿಗೆ ಸುದ್ದಿ ವಾಹಿನಿಯೊಂದರ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದ್ದು, ಸುದ್ದಿ ವಾಹಿನಿಯೊಂದರ ಮೇಲಿನ ನಿಷೇಧ ದೇಶದಲ್ಲಿ ತುರ್ತುಪರಿಸ್ಥಿತಿಯಂತಹ ಸನ್ನಿವೇಶಗಳು ಮರುಕಳಿಸಿದಂತಾಗಿದೆ ಎಂದು...

ಕೋಲ್ಕತಾ: ತುರ್ತುಪರಿಸ್ಥಿಯ ಬಳಿಕ ಇದೇ ಮೊದಲ ಬಾರಿಗೆ ಸುದ್ದಿ ವಾಹಿನಿಯೊಂದರ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದ್ದು, ಸುದ್ದಿ ವಾಹಿನಿಯೊಂದರ ಮೇಲಿನ ನಿಷೇಧ ದೇಶದಲ್ಲಿ ತುರ್ತುಪರಿಸ್ಥಿತಿಯಂತಹ ಸನ್ನಿವೇಶಗಳು ಮರುಕಳಿಸಿದಂತಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಶುಕ್ರವಾರ ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದ ಸಂದರ್ಭದಲ್ಲಿ ಖ್ಯಾತ ಹಿಂದಿ ಸುದ್ದಿ ವಾಹಿನಿ ಎನ್ ಡಿಟಿವಿ ಸೂಕ್ಷ್ಮ ಮಾಹಿತಿಗಳನ್ನು ಬಹಿರಂಗಪಡಿಸಿತ್ತು ಎಂದು ಹೇಳಿದ್ದ ಮಾಹಿತಿ ಮತ್ತು ತಂತ್ರಜ್ಞಾನದ ಆಂತರಿಕ ಸಮಿತಿಯು, ನ.9 ರಂದು ಯಾವುದೇ ರೀತಿಯ ಕಾರ್ಯಕ್ರಮಗಳ ಹಾಗೂ ಸುದ್ದಿ ಪ್ರಸಾರ ಮಾಡದಂತೆ ಆದೇಶವನ್ನು ನೀಡಿತ್ತು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿಯವರು, ಎನ್ ಡಿಟಿವಿ ಮೇಲೆ ನಿಷೇಧ ಹೇರಿರುವುದು ನಿಜಕ್ಕೂ ಆಶ್ಚರ್ಯವನ್ನು ತಂದಿದೆ. ಪಠಾಣ್ ಕೋಟ್ ದಾಳಿ ಕುರಿತ ಸುದ್ದಿ ಪ್ರಸಾರದ ಮೇಲೆ ಸರ್ಕಾರಕ್ಕೆ ಸಮಸ್ಯೆಗಳಿದ್ದರೆ, ಅದಕ್ಕೆ ಅದರದೇ ಆದ ನಿಬಂಧನೆಗಳಿವೆ. ಅದರ ಅನುಸಾರವಾಗಿ ಸರ್ಕಾರ ನಡೆಯಬಹುದಿತ್ತು. ಆದರೆ, ಸುದ್ದಿ ವಾಹಿನಿಯ ಮೇಲೆ ನಿಷೇಧ ಹೇರಿರುವುದು ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಸನ್ನಿವೇಶಗಳು ಮರುಕಳಿಹಿಸುಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT