ಭೋಪಾಲ್ ಕೇಂದ್ರ ಕಾರಾಗೃಹದ ಮುಂದೆ ಕಾವಲು ಕಾಯುತ್ತಿರುವ ಪೊಲೀಸ್ ಸಿಬ್ಬಂದಿ 
ದೇಶ

ಭೋಪಾಲ್ ಎನ್ ಕೌಂಟರ್: ನ್ಯಾಯಾಂಗ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶ

ಎಂಟು ಮಂದಿ ಸಿಮಿ ಉಗ್ರರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯ ಪ್ರದೇಶ ಸರ್ಕಾರ...

ಭೋಪಾಲ್: ಎಂಟು ಮಂದಿ ಸಿಮಿ ಉಗ್ರರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯ ಪ್ರದೇಶ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ತನಿಖಾ ಸಮಿತಿಯ ನೇತೃತ್ವವನ್ನು ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಸ್.ಕೆ.ಪಾಂಡೆ ವಹಿಸಲಿದ್ದಾರೆ. ಸಿಮಿ ಉಗ್ರರು ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾದ ಸಂದರ್ಭ ಮತ್ತು ಪೊಲೀಸರು ಅವರನ್ನು ಎನ್ ಕೌಂಟರ್ ನಲ್ಲಿ ಸಾಯಿಸಿದ್ದು ಮೊದಲಾದವುಗಳ ಬಗ್ಗೆ ತಂಡ ತನಿಖೆ ನಡೆಸಲಿದೆ.
ಎನ್ ಕೌಂಟರ್ ಬಗ್ಗೆ ವಿವರವಾದ ವರದಿ ನೀಡುವಂತೆ ಮಧ್ಯ ಪ್ರದೇಶ ಹೈಕೋರ್ಟ್ ನಿನ್ನೆ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿತ್ತು. ಘಟನೆ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಹಿಂದೆ ಘೋಷಿಸಿದ್ದರು. ಇನ್ನೊಂದೆಡೆ ರಾಜ್ಯ ಗೃಹ ಸಚಿವ ಭೂಪೇಂದ್ರ ಸಿಂಗ್, ಎನ್ ಕೌಂಟರ್ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ ಎಂದು ಹೇಳಿದ್ದರು.
ಭೋಪಾಲ್ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ರಾಮಶಂಕರ್ ಯಾದವ್ ಅವರನ್ನು ಕಳೆದ ಭಾನುವಾರ ಕೊಂದು ಎಂಟು ಮಂದಿ ಸಿಮಿ ಉಗ್ರರು ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ನಂತರ ಕೆಲವೇ ಗಂಟೆಗಳಲ್ಲಿ ಅವರನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿದ್ದರು. ಈ ಘಟನೆ ಬಗ್ಗೆ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಸಂಶಯ, ಸಂದೇಹಗಳನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT