ಸಂಗ್ರಹ ಚಿತ್ರ 
ದೇಶ

ಮಿತಿ ಮೀರಿದ ವಾಯುಮಾಲಿನ್ಯ: ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಎನ್'ಜಿಟಿ

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಾಖಲೆ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಾಖಲೆ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಕಿಡಿಕಾರಿದೆ.

ಕಳೆದ 17 ವರ್ಷಕ್ಕಿಂತಲೂ ಈ ಬಾರಿ ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ವಾಯು ಮಾಲಿನ್ಯ ಏರಿಕೆಯಾಗಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ ತರುವಲ್ಲಿ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕಿಡಿಕಾರಿದೆ.

ಅಧಿಕೃತ ವರದಿಗಳ ಪ್ರಕಾರ ದೀಪಾವಳಿ ಹಬ್ಬದ ಬಳಿಕ ದೆಹಲಿಯಲ್ಲಿ ಶೇ.62-7 ರಷ್ಟು ವಾಯುಮಾಲಿನ್ಯ ಏರಿಕೆಯಾಗಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿಯ ವಿರುದ್ಧ ತೀವ್ರವಾಗಿ ಕೆಂಡಾಮಂಡಲವಾಗಿರುವ ಹಸಿರುವ ನ್ಯಾಯಮಂಡಳಿಯು ಶೀಘ್ರಗತಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ರೀತಿಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ವಾಯು ಮಾಲಿನ್ಯಕ್ಕೆ ದೆಹಲಿ ಸರ್ಕಾರ ಸ್ಪಷ್ಟನೆ ನೀಡಿದ್ದು, ನೆರೆ ರಾಜ್ಯಗಳಾದ ಹರಿಯಾಣ ಪಂಜಾಬ್ ಹಾಗೂ ರಾಜಸ್ತಾನದಲ್ಲಿ ಬೆಳೆಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದು, ಇದರಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಹೇಳಿದೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯವು ವಾಯುಮಾಲಿನ್ಯ ನಿಯಂತ್ರಣಕ್ಕೆ 10 ವರ್ಷದ ಹಳೆಯ ಡೀಸೆಲ್ ವಾಹನಗಳು ಹಾಗೂ ಲಘು ಡೀಸೆಲ್ ವಾಹನಗಳ ಸಂಚಾರಗಳ ಮೇಲೆ ಮೊದಲು ನಿರ್ಬಂಧ ಹೇರಿ ಎಂದು ಹೇಳಿದೆ, ಅಲ್ಲದೆ, ವಾಯುಮಾಲಿನ್ಯಕ್ಕೆ ಕಾರಣವಾಗಿರುವ ನಾಲ್ಕು ರಾಜ್ಯಗಳಾದ ಪಂಜಾಬ್, ಹರಿಯಾಣ. ದೆಹಲಿ ಹಾಗೂ ರಾಜಸ್ತಾನದ ಪರಿಸರ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದ್ದು, ಬೆಳಗಳಿಗೆ ಬೆಂಕಿ ಹಚ್ಚುತ್ತಿರುವ ಕುರಿತಂತೆ ನ.8ರ ಒಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT