ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿ ನಿರಾಕರಿಸಿದ ಯುವತಿಗೆ ಬಾಟಲಿಯಿಂದ ಇರಿದ ಯುವಕ

ಪ್ರೀತಿಯ ನಿವೇದನೆಯನ್ನು ಒಪ್ಪಿಕೊಳ್ಳದ ಕಾರಣಕ್ಕೆ ಕುಪಿತಗೊಂಡ ಯುವಕನೊಬ್ಬ ಯುವತಿಯನ್ನು ಒಡೆದ ಬಾಟಲಿಯಿಂದ ಇರಿದಿರುವ ಘಟನೆಯೊಂದು ಕೊಯಮತ್ತೂರಿನ ಭಾರತಯಾರ್ ವಿಶ್ವವಿದ್ಯಾಲಯದ...

ಕೊಯಮತ್ತೂರು: ಪ್ರೀತಿಯ ನಿವೇದನೆಯನ್ನು ಒಪ್ಪಿಕೊಳ್ಳದ ಕಾರಣಕ್ಕೆ ಕುಪಿತಗೊಂಡ ಯುವಕನೊಬ್ಬ ಯುವತಿಯನ್ನು ಒಡೆದ ಬಾಟಲಿಯಿಂದ ಇರಿದಿರುವ ಘಟನೆಯೊಂದು ಕೊಯಮತ್ತೂರಿನ ಭಾರತಯಾರ್ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.

21 ವರ್ಷದ ಕನಕಲಕ್ಷ್ಮಿ ಎಂಬ ಯುವತಿಗೆ ವೆಂಬುರಾಜ್ ಎಂಬ ಯುವಕ ಪ್ರೀತಿಸುವಂತೆ ನಿವೇದನೆಯನ್ನು ಮಾಡಿಕೊಂಡಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿದ್ದಾಳೆ. ಅಲ್ಲದೆ, ದಾರಿ ಬಿಡುವಂತೆ ಹೇಳಿದ್ದಾಳೆ. ಇದರಂತೆ ಇಬ್ಬರ ನಡುವೆ ಮಾತಿಕ ಚಕಮಕಿ ನಡೆದಿದೆ.

ಎಷ್ಟು ಹೇಳಿದರೂ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಯ ನಡೆಗೆ ತೀವ್ರವಾಗಿ ಕೋಪಗೊಂಡಿರುವ ಯುವಕ ಕೈಯಲ್ಲಿದ ಬಾಟಲಿಯನ್ನು ಒಡೆದು ಯುವತಿಯ ಕುತ್ತಿಗೆಯನ್ನು ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವತಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿ ವೆಂಬುರಾಜ್ ನನ್ನು ಪೊಲೀಸರು ಇದೀಗ ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT