ದೇಶ

ಹಿಮಾಚಲದಲ್ಲಿ ಕಣಿವೆಗೆ ಉರುಳಿದ ಬಸ್, 18 ಸಾವು, 25 ಮಂದಿಗೆ ಗಾಯ

Lingaraj Badiger
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬಸ್ಸೊಂದು ಕಣಿವೆಗೆ ಉರುಳಿಬಿದ್ದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಈ ಭೀಕರ ಅಪಘಾತಕ್ಕೆ ಚಾಲಕನ ಅತೀ ವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡಿಯಿಂದ ಕುಲ್ಲು ನಗರಕ್ಕೆ ತೆರಳುತ್ತಿದ್ದ ಈ ಬಸ್ ಚಾಲಕನ ನಿಯಂತ್ರ ತಪ್ಪಿ ಬಿದ್ರವನಿ ಬಳಿ ನದಿಗೆ ಉರುಳಿ ಬಿದ್ದಿದೆ. ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಘಟನೆಯಲ್ಲಿ 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಡಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೆ.ಥಾಕೂರ್ ಅವರು ತಿಳಿಸಿದ್ದಾರೆ.
SCROLL FOR NEXT