ಮನೋಹರ್ ಪರಿಕ್ಕರ್ 
ದೇಶ

ಶೇ.95ರಷ್ಟು ಮಾಜಿ ಸೈನಿಕರಿಗೆ ಒಆರ್ ಒಪಿ ಬಗ್ಗೆ ಖುಷಿ ಇದೆ: ಪರಿಕ್ಕರ್

ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿ ಸಂಬಂಧ ಮಾಜಿ ಸೈನಿಕ ರಾಮ್ ಕಿಶನ್ ಗ್ರೆವಾಲ್ ಆತ್ಮಹತ್ಯೆ ಪ್ರಕರಣ ತೀವ್ರ ರಾಜಕೀಯ ಸ್ವರೂಪ ಪಡೆಯುತ್ತಿರುವ....

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿ ಸಂಬಂಧ ಮಾಜಿ ಸೈನಿಕ ರಾಮ್ ಕಿಶನ್ ಗ್ರೆವಾಲ್ ಆತ್ಮಹತ್ಯೆ ಪ್ರಕರಣ ತೀವ್ರ ರಾಜಕೀಯ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಶೇ.95ರಷ್ಟು ಮಾಜಿ ಸೈನಿಕರು ಈಗಾಗಲೇ ಒಆರ್ ಒಪಿ ಯೋಜನೆಯ ಲಾಭ ಪಡೆದಿದ್ದಾರೆ ಮತ್ತು ಆ ಬಗ್ಗೆ ಅವರಿಗೆ ಖುಷಿ ಇದೆ ಎಂದು ಶನಿವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಿಕ್ಕರ್, ಶೇ.95ರಷ್ಟು ಮಾಜಿ ಸೈನಿಕರು ಈಗಾಗಲೇ ಒಆರ್ ಒಪಿ ಯೋಜನೆಯ ಲಾಭ ಪಡೆದಿದ್ದಾರೆ. ಇನ್ನುಳಿದ ಶೇ.5ರಷ್ಟು ಮಾಜಿ ಸೈನಿಕರು ತುಂಬಾ ಹಳೆಯ ಪಿಂಚಣಿದಾರರಾಗಿದ್ದು, ಅವರ ದಾಖಲೆಗಳು ಅಪೂರ್ಣವಾಗಿವೆ. ಹೀಗಾಗಿ ವಿಳಂಬವಾಗುತ್ತಿದೆ. ಆದರೂ ಮುಂದಿನ ಎರಡು ತಿಂಗಳಲ್ಲಿ ಅವರಿಗೂ ಒಆರ್ ಒಪಿ ಲಾಭ ಸಿಗುವಂತೆ ಮಾಡಲಾಗುವುದು ಎಂದಿದ್ದಾರೆ.
ಕಳೆದ 43 ವರ್ಷಗಳಿಂದ ಜಾರಿಯಾಗದ ಒಆರ್ ಒಪಿ ಯೋಜನೆಯನ್ನು ಎನ್ ಡಿಎ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.
ಕೆಲವು ತಾಂತ್ರಿಕ ಕಾರಣ ಮತ್ತು ದಾಖಲೆಗಳ ಸಮಸ್ಯೆಯಿಂದಾಗಿ ಒಟ್ಟು 20 ಲಕ್ಷ ಮಾಜಿ ಸೈನಿಕರ ಪೈಕಿ ಕೇವಲ 1 ಲಕ್ಷ ಮಾಜಿ ಸೈನಿಕರಿಗೆ ಮಾತ್ರ ಒಆರ್ ಒಪಿ ಯೋಜನೆಯ ಲಾಭ ಸಿಕ್ಕಿಲ್ಲ. ಶೀಘ್ರದಲ್ಲೇ ಆ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT