ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ 
ದೇಶ

ಎನ್'ಡಿಟಿವಿ ಮೇಲೆ ನಿಷೇಧ: ನಿರ್ಧಾರ ಸಮರ್ಥಿಸಿಕೊಂಡ ಪರಿಕ್ಕರ್

ಎನ್ ಡಿಟಿವಿ ಸುದ್ದಿ ವಾಹಿನಿ ಮೇಲಿನ ನಿಷೇಧ ಹೇರಿಕೆ ವಿಚಾರ ಭದ್ರತೆಗೆ ಸಂಬಂಧಪಟ್ಟ ವಿಚಾರವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶನಿವಾರ ಹೇಳಿದ್ದಾರೆ...

ಪಣಜಿ: ಎನ್ ಡಿಟಿವಿ ಸುದ್ದಿ ವಾಹಿನಿ ಮೇಲಿನ ನಿಷೇಧ ಹೇರಿಕೆ ವಿಚಾರ ಭದ್ರತೆಗೆ ಸಂಬಂಧಪಟ್ಟ ವಿಚಾರವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿವಾಹಿನಿ ಮೇಲೆ ನಿಷೇಧ ಹೇರಿದ್ದಕ್ಕಾಗಿ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಇದು ಭದ್ರತೆಯ ವಿಚಾರವಾಗಿದ್ದು, ಸುದ್ದಿ ವಾಹಿನಿ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘನೆ ಮಾಡಿದೆ. ಹೀಗಾಗಿ ಸುದ್ದಿ ವಾಹಿನಿ ಮೇಲೆ ನಿಷೇಧ ಹೇರಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ದಾಳಿ ಮಾಡುತ್ತಿರುವ ಸಮಯದಲ್ಲಿ ಎನ್'ಡಿಟಿವಿ ಸುದ್ದಿ ವಾಹಿನಿ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸಿತ್ತು. ಉಗ್ರರು ಇದನ್ನು ಬಳಸಿಕೊಂಡಿದ್ದರೆ, ದೊಡ್ಡ ಮಟ್ಟದಲ್ಲಿ ಅನಾಹುತ ಸಂಭವಿಸುತ್ತಿತ್ತು. ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಸಮಯದಲ್ಲಿ ಸ್ಥಳದ ಪ್ರತ್ಯಕ್ಷ ದೃಶ್ಯಗಳನ್ನು ತೋರಿಸಿದಾಗ ಉಗ್ರರು ಕಾರ್ಯಾಚರಣೆಯ ಮಾಹಿತಿಗಳನ್ನು ಪಡೆದುಕೊಳ್ಳಲು ಆರಂಭಿಸುತ್ತಾರೆ. ಪಠಾಣ್ ಕೋಟ್ ದಾಳಿ ವೇಳೆ ಸುದ್ದಿ ವಾಹಿನಿ ನಿಯಮಗಳನ್ನು ಉಲ್ಲಂಘಿಸಿದೆ. ಹೀಗಾಗಿ ಸುದ್ದಿ ವಾಹಿನಿ ಮೇಲೆ 1 ದಿನದ ಕಾಲ ನಿಷೇಧವನ್ನು ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಇದು ನಮ್ಮ ಸರ್ಕಾರವೇ ರೂಪಿಸಿದ ನಿಯಮವಲ್ಲ. 2008ರ 26/11ರಂದು ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದಾಗ ಅಂದಿನ ಯುಪಿಎ ಸರ್ಕಾರವೇ ರೂಪಿಸಿದ ನಿಯಮಗಳಾಗಿವೆ. ಕಳೆದ ಐದು ವರ್ಷಗಳಿಂದಲೂ ವಿವಿಧ ವಾಹಿನಿಗಳು ಈ ನಿಯಮಗಳನ್ನು ಉಲ್ಲಂಘಿಸಿದೆ. 21 ಬಾರಿ ವಿವಿಧ ವಾಹಿನಿಗಳು ಈ ನಿಯಮವನ್ನು ಉಲ್ಲಂಘಿಸಿದೆ.

ಭದ್ರತೆ ಕುರಿತಂತೆ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸುದ್ದಿ ವಾಹಿನಿಗಳಿಗೆ ಸೂಚನೆಗಳನ್ನು ನೀಡಿದೆ. ಸೂಚನೆಗಳ ನಡುವೆಯೂ ಎನ್ ಡಿಟಿವಿ ನಿಯಮವನ್ನು ಉಲ್ಲಂಘನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಸುದ್ದಿ ವಾಹಿನಿ ವಿರುದ್ಧ ಕ್ರಮಕೈಗೊಂಡಿದೆ. ಸುದ್ದಿ ವಾಹಿನಿಗೆ ಸರ್ಕಾರ ಸಂಪೂರ್ಣವಾಗಿ ನಿಷೇಧವನ್ನು ಹೇರಿಲ್ಲ. ಬದಲಾಗಿ 24 ಗಂಟೆಗಳ ಯಾವುದೇ ಕಾರ್ಯಕ್ರಮಗಳು ಹಾಗೂ ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶಿಸಿದೆ ಎಂದು ತಮ್ಮ ನಿರ್ಧಾರವನ್ನು ಪರಿಕ್ಕರ್ ಅವರು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT