ಆತ್ಮಹತ್ಯೆ 
ದೇಶ

ಠಾಣೆಗೆ ಕರೆದ್ಯೊಯ್ದು ಶಿಕ್ಷಕನಿಂದ ಶೂ ನೆಕ್ಕಿಸಿದ ಪೊಲೀಸರು, ಮನನೊಂದು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಂಧಿಸಿದ ಪೊಲೀಸರು ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಮನನೊಂದು ಶಿಕ್ಷಕ ಆತ್ಮಹತ್ಯೆಗೆ ಶರಣಾಗಿದ್ದಾರೆ...

ಶಿವಪುರಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಂಧಿಸಿದ ಪೊಲೀಸರು ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಮನನೊಂದು ಶಿಕ್ಷಕ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಜುಜಾಟ ಆರೋಪ ಸಂಬಂಧ ಸಜಾಪುರ್ ಪ್ರಾಥಮಿಕ ಶಾಲೆಯ ಶಿಕ್ಷಕ ಮನೋಜ್ ಪುರೋಹಿತ್ ನನ್ನು ಬಂಧಿಸಿ ಠಾಣೆಗೆ ಕರೆದ್ಯೊಯ್ದು ಅನುಚಿತವಾಗಿ ವರ್ತಿಸಿದ ಪೊಲೀಸರು ಆತನ ನಾಲಿಗೆಯಿಂದ ತಮ್ಮ ಶೂಗಳನ್ನು ನೆಕ್ಕಿಸಿ, ವಿವಸ್ತ್ರಗೊಳಿಸಿ ಚನ್ನಾಗಿ ಥಳಿಸಿದ್ದರು. ಇದರಿಂದ ಮನನೊಂದು ಪುರೋಹಿತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಜೈಲಿನಿಂದ ಹೊರ ಬಂದ ಶಿಕ್ಷಕ ಮನನೊಂದು ಅಕ್ಟೋಬರ್ 30 ರಂದು ವಿಷ ಕುಡಿದಿದ್ದರು. ಕೂಡಲೇ ಅವರನ್ನು ಝಾನ್ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಗುರುವಾರ ಸಾವನ್ನಪ್ಪಿದ್ದಾನೆ. 
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ತನ್ನ ಸಾವಿಗೆ ಐವರು ಪೊಲೀಸರು ಹಾಗೂ ಪತ್ರಕರ್ತನೊರ್ವ ಕಾರಣ ಎಂದು ಹೇಳಿದ್ದಾನೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT