ಸಾಂದರ್ಭಿಕ ಚಿತ್ರ 
ದೇಶ

ಎನ್ ಡಿಟಿವಿಗೆ ಒಂದು ದಿನದ ನಿಷೇಧ ಆದೇಶ ತಡೆಹಿಡಿದ ಕೇಂದ್ರ ಸರ್ಕಾರ

ಪ್ರಸಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಎನ್ ಡಿಟಿವಿಗೆ ವಿಧಿಸಿದ್ಧ 24 ಗಂಟೆಗಳ ನಿಷೇಧ....

ನವದೆಹಲಿ: ಪ್ರಸಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಎನ್ ಡಿಟಿವಿಗೆ ವಿಧಿಸಿದ್ಧ 24 ಗಂಟೆಗಳ ನಿಷೇಧ ಆದೇಶವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ತಡೆಹಿಡಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇಂದು ಬೆಳಗ್ಗೆಯಷ್ಟೇ ಪಠಾಣ್ ಕೋಟ್ ದಾಳಿ ಪ್ರಸಾರ ಮಾಡಿದ್ದಕ್ಕೆ ಒಂದು ದಿನದ ನಿಷೇಧ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಎನ್ ಡಿಟಿವಿ ಸುಪ್ರೀಕೋರ್ಟ್ ಮೆಟ್ಟಿಲೇರಿತ್ತು. ಇದರ ಬೆನ್ನಲ್ಲೇ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿಷೇಧ ನಿರ್ಧಾರವನ್ನು ಮಾಧ್ಯಮ ಸಂಸ್ಥೆಗಳು, ಭಾರತೀಯ ಸಂಪಾದಕರ ಸಂಘ ಹಾಗೂ ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ಕೇಂದ್ರ ಸರ್ಕಾರ ಮಾಧ್ಯಮ ಮತ್ತು ಭಾರತೀಯ ನಾಗರಿಕರ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಹಾಗೂ ಸರ್ಕಾರದ ಈ ನಿರ್ಧಾರ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ ಎಂದು ಸಂಪಾದಕರ ಸಂಘ ವಾಗ್ದಾಳಿ ನಡೆಸಿತ್ತು.
ಇತ್ತೀಚೆಗೆ ಪಠಾಣ್ ಕೋಟ್ ಉಗ್ರರ ದಾಳಿ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಪ್ರಸಾರ ಮಾಡಿ ಪ್ರಸಾರ ನಿಯಮ ಉಲ್ಲಂಘಿಸಿದ ಆರೋಪದಡಿ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯರಾತ್ರಿ ಒಟ್ಟು 24 ಗಂಟೆ ವರೆಗೆ ಯಾವುದೇ ರೀತಿಯ ಕಾರ್ಯಾಕ್ರಮಗಳು ಹಾಗೂ ಸುದ್ದಿ ಪ್ರಸಾರ ಮಾಡದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎನ್ ಡಿಟಿವಿಗೆ ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT