ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರೆ ಪ್ರದೇಶದಲ್ಲಿ ರಕ್ಷಣಾ ಸಿಬ್ಬಂದಿ ಇಬ್ಬರು ಅಪರಿಚಿತ ಉಗ್ರರನ್ನು ಎನ್ ಕೌಂಟರ್...

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರೆ ಪ್ರದೇಶದಲ್ಲಿ ರಕ್ಷಣಾ ಸಿಬ್ಬಂದಿ ಇಬ್ಬರು ಅಪರಿಚಿತ ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ದಂಗಿವಾಚ ಸಮೀಪ ದುರ್ಸೂ ಗ್ರಾಮದಲ್ಲಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಇಬ್ಬರು ವಿದೇಶಿ ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಕೆಲವು ಉಗ್ರರು ಅವಿತುಕೊಂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ರಕ್ಷಣಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಸೇನೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ ಉಗ್ರರು ಹೊಡೆದುರುಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ
ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಯಾವ ಸಂಘಟನೆಗೆ ಸೇರಿದವರು ಮತ್ತು ಯಾವ ದೇಶದ ನಾಗರಿಕರು ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT