500, 100 ರೂ ನೋಟು ರದ್ದತಿ: ತಿರುಪತಿ ದೇವಾಲಯದಲ್ಲಿ ಡೆಬಿಟ್ ಕಾರ್ಡ್ ಮಷಿನ್ ಬಳಕೆ 
ದೇಶ

500, 100 ರೂ ನೋಟು ರದ್ದತಿ: ತಿರುಪತಿ ದೇವಾಲಯದಲ್ಲಿ ಡೆಬಿಟ್ ಕಾರ್ಡ್ ಮಷಿನ್ ಬಳಕೆ

500, 1000 ರೂ ನೋಟು ರದ್ದತಿಯಾಗಿರುವ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ದೇವಾಲಯಗಳಲ್ಲೂ ಸಹ ಭಕ್ತಾದಿಗಳಿಂದ 500,1000 ರೂ ನೋಟುಗಳನ್ನು ಸ್ವೀಕರಿಸಲಾಗುತ್ತಿಲ್ಲ.

ಹೈದರಾಬಾದ್: 500, 1000  ರೂ ನೋಟು ರದ್ದತಿಯಾಗಿರುವ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ದೇವಾಲಯಗಳಲ್ಲೂ ಸಹ ಭಕ್ತಾದಿಗಳಿಂದ 500,1000 ರೂ ನೋಟುಗಳನ್ನು ಸ್ವೀಕರಿಸಲಾಗುತ್ತಿಲ್ಲ. 
ರದ್ದುಗೊಂಡಿರುವ ಮುಖಬೆಲೆಯ ನೋಟುಗಳನ್ನು ಹುಂಡಿಗೆ ಹಾಕದಂತೆ ಭಕ್ತಾದಿಗಳಿಗೆ ಬೃಂದಾವನದಲ್ಲಿ ಸೂಚನೆ ನೀಡಲಾಗಿದ್ದರೆ, ತಿರುಪತಿಯಲ್ಲಿ ಮಾತ್ರ ಎಲ್ಲಾ ನೋಟುಗಳನ್ನು ಸ್ವೀಕರಿಸಲಾಗುತ್ತಿದೆ. ಆದರೆ ಭಕ್ತಾದಿಗಳಿಗೆ ಪ್ರಸಾದ ಮತ್ತು ಟಿಕೆಟ್ ಗಳನ್ನು ನೀಡಲು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಅಲ್ಲದೇ ಯಾತ್ರಾರ್ಥಿಗಳಿಗೆ ಉಚಿತವಾಗಿ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. 
ಬೃಂದಾವನದಲ್ಲಿ 500, 1000 ರೂ ನೋಟುಗಳನ್ನು ಹುಂಡಿಯಲ್ಲಿ ಹಾಕದಂತೆ ಭಕ್ತಾದಿಗಳಿಗೆ ಸೂಚಿಸಿ ಬ್ಯಾನರ್ ನ್ನು ಹಾಕಲು ಶ್ರೀ ಕೃಷ್ಣ ಜನ್ಮಭೂಮಿ ಟ್ರಸ್ಟ್ ಚಿಂತನೆ ನಡೆಸಿದ್ದು ಬ್ಯಾನರ್ ಗಳಿಗಾಗಿ ಈಗಾಗಲೇ ಆರ್ಡರ್ ನೀಡಿರುವುದಾಗಿ ಟ್ರಸ್ಟ್ ನ ಕಾರ್ಯದರ್ಶಿ ಕಪಿಲ್ ಶರ್ಮಾ ತಿಳಿಸಿದ್ದಾರೆ. 
ಇನ್ನು 500, 1000 ರೂ ನೋಟುಗಳನ್ನು ಪಡೆಯಲು ನಿರಾಕರಿಸಿದ ಟಿಟಿಡಿ ವಿರುದ್ಧ ಭಕ್ತಾದಿಗಳು ಕೆಲ ಸಮಯ ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ. ಭಕ್ತಾದಿಗಳಿಗೆ ಪ್ರಸಾದ ಮತ್ತು ಟಿಕೆಟ್ ಗಳನ್ನು ನೀಡಲು ನಾವು 500, 1000 ರೂ ನೋಟುಗಳನ್ನು ಸ್ವೀಕರಿಸುತ್ತಿದ್ದೇವೆ. ಇದು ಕೇಂದ್ರ ಸರ್ಕಾರದ ಗಡುವು ಮುಕ್ತಾಯಗೊಳ್ಳುವವರೆಗೂ ಮುಂದುವರೆಯಲಿದೆ ಎಂದು ಟಿಟಿಡಿ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್