ನಾರಾಯಣ ಮೂರ್ತಿ 
ದೇಶ

500, 1000 ರೂ ನೋಟುಗಳ ರದ್ದತಿ ಕ್ರಮವನ್ನು ಶ್ಲಾಘಿಸಿದ ನಾರಾಯಣ ಮೂರ್ತಿ

500 ಹಾಗೂ 1000 ರೂ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವುದು ಅತ್ಯದ್ಭುತವಾದ ಕ್ರಮ ಎಂದು ಇನ್ ಫೋಸಿಸ್ ಸ್ಥಾಪಕ ಉದ್ಯಮಿ ನಾರಾಯಣ ಮೂರ್ತಿ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಯಾವಾಗಲೂ ಸಮರ್ಥವಾಗಿ ಹೋರಾಡುತ್ತಿದ್ದು, 500 ಹಾಗೂ 1000 ರೂ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವುದು ಅತ್ಯದ್ಭುತವಾದ ಕ್ರಮ ಎಂದು ಇನ್ ಫೋಸಿಸ್ ಸ್ಥಾಪಕ ಉದ್ಯಮಿ ನಾರಾಯಣ ಮೂರ್ತಿ ಹೇಳಿದ್ದಾರೆ. 
ಎಕನಾಮಿಕ್ ಟೈಮ್ಸ್ ಗೆ ನೀಡಿರುವ ಚುಟುಕು ಸಂದರ್ಶನದಲ್ಲಿ ಮಾತನಾಡಿರುವ ನಾರಾಯಣ ಮೂರ್ತಿ, ಭಯೋತ್ಪಾದನೆ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಕೈಗೊಂಡಿರುವ ಈ ಕ್ರಮ ಶ್ಲಾಘನೀಯವಾದದ್ದು, ಯೋಗ್ಯ ಆರ್ಥಿಕ ಪ್ರಗತಿ ಸಾಧಿಸಬೇಕಾದರೆ  ಇಂಥಹ ಕ್ರಮ ಅಗತ್ಯವಿದ್ದು ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. 
ಕಪ್ಪುಹಣ ಹೊಂದಿರದ ಸಾಮಾನ್ಯ ಜನತೆ ನೋಟುಗಳನ್ನು ಬದಲಿಸಿಕೊಳ್ಳಲು ಕೇಂದ್ರ ಸರ್ಕಾರ ಹಲವು ಮಾರ್ಗಗಳನ್ನು ಸೂಚಿಸಿದೆ. ಪ್ರಾಮಾಣಿಕ ವ್ಯಕ್ತಿಗಳು ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸುತ್ತಿದ್ದಾರೆ, ಅಪ್ರಮಾಣಿಕ ವ್ಯಕ್ತಿಗಳು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT