ಕಡಿಮೆ ಮುಖಬೆಲೆಯ ಕರೆನ್ಸಿ ಕೊರತೆ: ರೈಲು ಟಿಕೆಟ್ ರದ್ದತಿಗೆ ನಗದು ಮರುಪಾವತಿ ಸ್ಥಗಿತ! 
ದೇಶ

ಕಡಿಮೆ ಮುಖಬೆಲೆಯ ಕರೆನ್ಸಿ ಕೊರತೆ: ರೈಲು ಟಿಕೆಟ್ ರದ್ದತಿಗೆ ನಗದು ಮರುಪಾವತಿ ಸ್ಥಗಿತ!

500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವುದರಿಂದ ಕಡಿಮೆ ಮುಖಬೆಲೆಯ ರೂಪಾಯಿ ನೋಟುಗಳ ಕೊರತೆ ಎದುರಾಗಿದ್ದು, ರೈಲು ನಿಲ್ದಾಣಗಳಲ್ಲಿ ಟಿಕೆಟ್ ರದ್ದತಿ ಮಾಡುವವರಿಗೆ ನಗದು ಮರುಪಾವತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನವದೆಹಲಿ: 500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವುದರಿಂದ ಕಡಿಮೆ ಮುಖಬೆಲೆಯ ರೂಪಾಯಿ ನೋಟುಗಳ ಕೊರತೆ ಎದುರಾಗಿದ್ದು, ರೈಲು ನಿಲ್ದಾಣಗಳಲ್ಲಿ ಟಿಕೆಟ್ ರದ್ದತಿ ಮಾಡುವವರಿಗೆ ನಗದು ಮರುಪಾವತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 
ಟಿಕೆಟ್ ರದ್ದುಗೊಳಿಸಿದ ಪ್ರಯಾಣಿಕರಿಗೆ ನಗದನ್ನು ಮರುಪಾವತಿ ಮಾಡುವ ಬದಲು ಟಿಕೆಟ್ ಠೇವಣಿ ರಸೀದಿ(ಟಿಡಿಆರ್)ನ್ನು ನೀಡಲಾಗುತ್ತಿದೆ. ಒಂದು ವೇಳೆ 10 ಸಾವಿರ ಅಥವಾ ಅದಕ್ಕಿಂತ ಮೇಲ್ಪಟ್ಟ ಮೊತ್ತದ ಟಿಕೆಟ್ ಗಳನ್ನು ರದ್ದುಗೊಳಿಸಿದರೆ, ಹಣವನ್ನು ನೇರವಾಗಿ ಪ್ರಯಾಣಿಕರ ಬ್ಯಾಂಕ್ ಖಾತೆಗೇ ವರ್ಗಾಯಿಸಲಾಗುತ್ತದೆ. ಆದರೆ ಪ್ರಯಾಣಿಕರು ಟಿಕೆಟ್ ರದ್ದುಗೊಳಿಸಬೇಕಾದರೆ ಬ್ಯಾಂಕ್ ಖಾತೆ ಮಾಹಿತಿಯನ್ನು ನೀಡಬೇಕಾಗುತ್ತದೆ 
ರೈಲು ನಿಲ್ದಾಣಗಳಲ್ಲಿ ಟಿಕೆಟ್ ಕಾಯ್ದಿರಿಸುವುದಕ್ಕೆ 500, 1000 ರೂ ಗಳ ನೋಟುಗಳನ್ನು ಬಳಕೆ ಮಾಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕಡಿಮೆ ಮುಖಬೆಲೆಯ ಕರೆನ್ಸಿ ಕೊರತೆ ಎದುರಾಗಿದೆ. ಆದ್ದರಿಂದ ಟಿಡಿಆರ್ ನ್ನು ನೀಡಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT