ನಾಪತ್ತೆಯಾಗಿರು ತಮ್ಮ ಮಗನನ್ನು ನೆನೆದು ಕಣ್ಣೀರಿಡುತ್ತಿರುವ ನಜೀಬ್ ತಾಯಿ ಫಾತಿಮಾ 
ದೇಶ

ಜೆಎನ್'ಯು ವಿದ್ಯಾರ್ಥಿ ನಾಪತ್ತೆ: ಪತ್ತೆಗಾಗಿ ಮನೋತಜ್ಞರ ಮೊರೆ ಹೋದ ಪೊಲೀಸರು

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಪ್ರಕರಣ ಸಂಬಂಧ ವಿದ್ಯಾರ್ಥಿ ಪತ್ತೆಗಾಗಿ ಪೊಲೀಸರು ಗುರುವಾರ ವಿದ್ಯಾರ್ಥಿಗೆ ಈ ಹಿಂದೆ ಚಿಕಿತ್ಸೆ ನೀಡಿದ್ದ ಮನೋತಜ್ಞರ...

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಪ್ರಕರಣ ಸಂಬಂಧ ವಿದ್ಯಾರ್ಥಿ ಪತ್ತೆಗಾಗಿ ಪೊಲೀಸರು ಗುರುವಾರ ವಿದ್ಯಾರ್ಥಿಗೆ ಈ ಹಿಂದೆ ಚಿಕಿತ್ಸೆ ನೀಡಿದ್ದ ಮನೋತಜ್ಞರ ಮೊರೆ ಹೋಗಿದ್ದಾರೆ.

ಜೆಎನ್ ಯುನಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಜೀಬ್ ಅಹ್ಮಮದ್ (27) ಎಂಬ ವಿದ್ಯಾರ್ಥಿ ಕಳೆದ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ. ಸಾಕಷ್ಟು ಹುಡುಕಾಟ ನಡೆಸಿದ್ದರೂ ಈ ವರೆಗೂ ವಿದ್ಯಾರ್ಥಿ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಈ ಹಿಂದೆ ನಜೀಬ್ ಗೆ ಚಿಕಿತ್ಸೆ ನೀಡಿದ್ದ ವೈದ್ಯರ ಸಹಾಯ ಕೇಳಲು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ತನಿಖೆ ವೇಳೆ ಈ ಹಿಂದೆ ಮಾತನಾಡಿದ್ದ ವಿಮಾನ್ಸ್ ಆಸ್ಪತ್ರೆಯ ವೈದ್ಯರು ನಜೀಬ್ ಒಸಿಡಿ ಜೊತೆಗೆ ಖಿನ್ನತೆಯೊಳಗಾಗಿದ್ದ ಎಂದು ಹೇಳಿದ್ದರು.

ನಾಪತ್ತೆಯಾಗಿರುವ ವಿದ್ಯಾರ್ಥಿಗಾಗಿ ಸಾಕಷ್ಟು ದಾರಿಗಳ ಮೂಲಕ ಹುಡುಕಾಟವನ್ನು ನಡೆಸಿದ್ದೇವೆ, ಇದೀಗ ಮಾನಸಿಕ ದೃಷ್ಟಿಕೋನದಲ್ಲೂ ತನಿಖೆ ನಡೆಸಲಾಗುತ್ತಿದೆ. ಇದು ತನಿಖೆಗೆ ಸಹಕಾರಿಯಾಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಒಸಿಡಿ ಮತ್ತು ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಬಲ್ಲರು ಮತ್ತು ಕೆಲವೊಮ್ಮೆ ಮನಸ್ಸಿಗೆ ನೋವಾದಾಗ ಹಾಗೂ ಜಗಳವಾದಾಗ ತಮ್ಮ ಕುಟುಂಬಸ್ಥರನ್ನು ಬಿಟ್ಟು ಹೊರ ಹೋಗುವ ಲಕ್ಷಣವನ್ನು ಹೊಂದಿರುತ್ತಾರೆಂದು ತಜ್ಞರು ಮಾಹಿತಿ ನೀಡಿದ್ದಾರೆ.

ತಜ್ಞರ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಇದೀಗ ನಜೀಬ್ ಅವರ ತಾಯಿ, ಕುಟುಂಬಸ್ಥರು ಹಾಗೂ ವಿವಿಯ ಆಡಳಿತ ಮಂಡಳಿಯವರನ್ನು ಸಮಾಧಾನದಿಂದ ಇರುವಂತೆ ಹೇಳಲಾಗಿದೆ. ನಾಪತ್ತೆ ಕುರಿತಂತೆ ಯಾವುದೇ ರೀತಿಯಲ್ಲಿ ಗಲಾಟೆ ಮಾಡಿದರೂ ಅದು ಆತನನ್ನು ಮತ್ತಷ್ಟು ಭಯದಲ್ಲಿರುವಂತೆ ಮಾಡುತ್ತದೆ. ಹೀಗಾಗಿ ಸಮಾಧಾನದಿಂದ ಇರುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT