ಚಿಕಿತ್ಸೆಗೆಂದು ಭಾರತಕ್ಕೆ ಬಂದ ಬಾಂಗ್ಲಾದೇಶಿಗರಿಗೆ ತಟ್ಟಿತು ನೋಟ್ ಬಂದ್ ಬಿಸಿ 
ದೇಶ

ಚಿಕಿತ್ಸೆಗೆಂದು ಭಾರತಕ್ಕೆ ಬಂದ ಬಾಂಗ್ಲಾದೇಶಿಗರಿಗೆ ತಟ್ಟಿತು ನೋಟ್ ಬಂದ್ ಬಿಸಿ

ಭಾರತದಲ್ಲಿ ಚಿಕಿತ್ಸೆ ಪಡೆಯಲು ಭಾರತಕ್ಕೆ ಆಗಮಿಸಿದ್ದ ನೂರಾರು ಬಾಂಗ್ಲಾದೇಶಿ ನಾಗರಿಕರಿಗೆ 500, 1000 ರೂ ನೋಟುಗಳ ರದ್ದತಿ ಬಿಸಿ ತಟ್ಟಿದೆ.

ಭಾರತದಲ್ಲಿ ಚಿಕಿತ್ಸೆ ಪಡೆಯಲು ಭಾರತಕ್ಕೆ ಆಗಮಿಸಿದ್ದ ನೂರಾರು ಬಾಂಗ್ಲಾದೇಶಿ ನಾಗರಿಕರಿಗೆ 500, 1000 ರೂ ನೋಟುಗಳ ರದ್ದತಿ ಬಿಸಿ ತಟ್ಟಿದೆ. 
ಬಾಂಗ್ಲಾದೇಶದಿಂದ ಬಂದು ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ನಾಗರಿಕರು ಹಾಗೂ ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿರುವವರು ಬಾಂಗ್ಲಾ ಕರೆನ್ಸಿಯನ್ನು ಭಾರತದ ಕರೆನ್ಸಿಗೆ ಬದಲಾಯಿಸಿಕೊಳ್ಳುವ ವೇಳೆ ಗರಿಷ್ಟ ಮುಖಬೆಲೆಯ 500, 1000 ರೂ ನೋಟುಗಳ ಪಡೆದುಕೊಂಡಿದ್ದಾರೆ, ಆದರೆ ಚಿಕಿತ್ಸೆಗಾಗಿ ಬಂದವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕ್ರಮದ ಬಿಸಿ ತಟ್ಟಿದೆ.  
ರೋಗಿಗಳನ್ನು ದಾಖಲಿಸಲಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ 500, 1000 ರೂಗಳ ನೋಟುಗಳನ್ನು ಸ್ವೀಕರಿಸಲಾಗುತ್ತಿಲ್ಲ ಎಂದು ಕೋಲ್ಕತಾಗೆ ಬಂದಿರುವ ಬಾಂಗ್ಲಾದೇಶ ಜನರು ಹೇಳಿದ್ದಾರೆ.  ಆಸ್ಪತ್ರೆಯಲ್ಲಿ ಕೇವಲ 100 ರೂಪಾಯಿಗಳನ್ನು ಪಡೆಯಲಾಗುವುದು ಎಂದು ಹೇಳುತ್ತಿದ್ದಾರೆ. ಆದರೆ ನನ್ನ ಬಳಿ ಇರುವುದು ಕೆಲವೇ ಕೆಲವು 100 ರ ನೋಟುಗಳು ಎಂದು ಆಸ್ಪತ್ರೆಗೆ ದಾಖಲಾಗಿರುವವರ ಸಂಬಂಧಿಕರೊಬ್ಬರು ಹೇಳಿದ್ದಾರೆ. 
ಕ್ಯಾನ್ಸರ್ ನಿಂದ ಬಳಲುತ್ತಿರುವ ರೋಗಿಯೊಬ್ಬರು ಕಿಮೋಥೆರೆಪಿಗೆ ಒಳಗಾಗಬೇಕಿದ್ದು, ಆಸ್ಪತ್ರೆಗಳಲ್ಲಿ 500, 1000 ರೂ ನೋಟುಗಳನ್ನು ಸ್ವೀಕರಿಸಲಾಗುತ್ತಿಲ್ಲ. 100 ರೂ ನೋಟುಗಳನ್ನೇ ನೀಡಬೇಕೆಂದರೆ ನಾನು ಚಿಕಿತ್ಸೆ ಪಡೆಯದೇ  ವಾಪಸ್ ತೆರಳಬೇಕಾಗುತ್ತದೆ ಎಂದು ಚಿಕಿತ್ಸೆಪಡೆಯುತ್ತಿರುವವರೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT