ಕಾಂಗ್ರೆಸ್ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿ 
ದೇಶ

ನೋಟು ನಿಷೇಧದ ಹಿಂದೆ ಹಗರಣ: ತನಿಖೆ ನಡೆಸುವಂತೆ ಕಾಂಗ್ರೆಸ್ ಆಗ್ರಹ

ನೋಟು ನಿಷೇಧದ ಹಿಂದೆ ಹಗರಣವಿರುವುದಾಗಿ ಆರೋಪಗಳು ಕೇಳಿಬಂದಿದ್ದು ಈ ಬಗ್ಗೆ ನ್ಯಾಯಾಲಯ ಸೂಕ್ತ ರೀತಿಯ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಶನಿವಾರ...

ನವದೆಹಲಿ: ನೋಟು ನಿಷೇಧದ ಹಿಂದೆ ಹಗರಣವಿರುವುದಾಗಿ ಆರೋಪಗಳು ಕೇಳಿಬಂದಿದ್ದು ಈ ಬಗ್ಗೆ ನ್ಯಾಯಾಲಯ ಸೂಕ್ತ ರೀತಿಯ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿಯವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಸ್ತಾಪ ಮಾಡುವುದಕ್ಕೂ ಮುನ್ನವೇ ಈ ಬಗ್ಗೆ ಕಾಂಗ್ರೆಸ್ ಹೇಳಿತ್ತು. ನೋಟಿನ ಮೇಲೆ ನಿಷೇಧ ಹೇರುವುದಕ್ಕೂ ಮುನ್ನ ಈ ಬಗೆಗಿನ ಮಾಹಿತಿ ಬಿಜೆಪಿ ನಾಯಕರಿಗಿತ್ತು ಎಂಬುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. 
ಈ ಬಗ್ಗೆ ಪ್ರಶಾಂತ್ ಭೂಷಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದಾರೆ. ನೋಟಿನ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ಘೋಷಣೆ ಮಾಡುವುದಕ್ಕೂ ಕೇವಲ 1 ಗಂಟೆಗೂ ಮುನ್ನ ಪಶ್ಚಿಮ ಬಂಗಾಳದ ಬಿಜೆಪಿ ನಾಯಕರೊಬ್ಬರು ರು.3 ಕೋಟಿ ಹಣವನ್ನು ಬ್ಯಾಂಕಿನಲ್ಲಿ ಹಾಕಿದ್ದರು. ಈ ಬೆಳವಣಿಗೆಗಳನ್ನು ನೋಡಿದರೆ ಪ್ರಕಱಣ ಕುರಿತು ನ್ಯಾಯಾಲಯ ಸೂಕ್ತ ರೀತಿಯ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ. 
ರು.2000 ಮುಖಬೆಲೆ ನೋಟಿನ್ನು ಜಾರಿ ಮಾಡುವ ಮುಖಾಂತರ ಕಪ್ಪುಹಣವನ್ನು ಮಟ್ಟಹಾಕಲು ಹೇಗೆ ಸಾಧ್ಯ. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕಿದೆ. ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT