ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ 
ದೇಶ

ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ದೆಹಲಿ ಕ್ರೈಂ ಬ್ರಾಂಚ್'ಗೆ ಪ್ರಕರಣ ಹಸ್ತಾಂತರ

ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ...

ನವದೆಹಲಿ: ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. 
ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಯಾವುದೇ ರೀತಿಯ ಸುಳಿವುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಜೀಬ್ ಅಹ್ಮದ್ ಅವರ ತಾಯಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು. 
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಮಿಸಿದ್ದ ಸರ್ಕಾರ, ಪ್ರಕರಣದ ತನಿಖೆಯನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಿದೆ ಎಂದು ಹಿರಿಯ ಅಧಿಕಾರಿಘಲು ಮಾಹಿತಿ ನೀಡಿದ್ದಾರೆ. 
ಜೆಎನ್ ಯುನಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಜೀಬ್ ಅಹ್ಮಮದ್ (27) ಎಂಬ ವಿದ್ಯಾರ್ಥಿ ಕಳೆದ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT