ಮಮತಾ ಬ್ಯಾನರ್ಜಿ 
ದೇಶ

ಬ್ಯಾಂಕ್ ಗಳಿಗೆ ಭೇಟಿ ನೀಡಿ, ಕ್ಯೂನಲ್ಲಿದ್ದ ಜನರ ಕಷ್ಟ ವಿಚಾರಿಸಿದ ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರದ ನೋಟ್ ನಿಷೇಧದ ನಿರ್ಧಾರವನ್ನು ವಿರೋಧಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ...

ಕೋಲ್ಕತಾ: ಕೇಂದ್ರ ಸರ್ಕಾರದ ನೋಟ್ ನಿಷೇಧದ ನಿರ್ಧಾರವನ್ನು ವಿರೋಧಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಕೋಲ್ಕತಾದ ಹಲವು ಕಡೆ ಬ್ಯಾಂಕ್ ಹಾಗೂ ಎಟಿಎಂಗಳಿಗೆ ಭೇಟಿ ನೀಡಿ, ಕ್ಯೂನಲ್ಲಿ ನಿಂತಿದ್ದ ಜನರ ಕಷ್ಟ ವಿಚಾರಿಸಿದರು.
ಮಮತಾ ಬ್ಯಾನರ್ಜಿ ಅವರು ಇಂದು ದಕ್ಷಿಣ ಕೋಲ್ಕತಾದ ಜವಾಹರಲಾಲ್ ನೆಹರೂ ರಸ್ತೆಯ, ಆಶುತೋಶ್ ಮುಖರ್ಜಿ ರಸ್ತೆ ಹಾಗೂ ಶರತ್ ಬೋಸ್ ರಸ್ತೆಯಲ್ಲಿರುವ ಬ್ಯಾಂಕ್ ಗಳಿಗೆ ಭೇಟಿ, ಗ್ರಾಹಕರು ಹಾಗೂ ಬ್ಯಾಂಕ್ ಸಿಬ್ಬಂದಿಯೊಂದಿಗೆ ಮಾತನಾಡಿದರು.
ಕ್ಯೂನಲ್ಲಿದ್ದ ಗ್ರಾಹಕನೊಬ್ಬ ಬ್ಯಾಂಕ್ ನವರು ನಮಗೆ 100 ರುಪಾಯಿ ನೋಟ್ ಕೊಡುತ್ತಿಲ್ಲ ಎಂದು ಮಮತಾ ಬಳಿ ದೂರಿದರು, ಇದಕ್ಕೆ ಪ್ರತಿಕ್ರಿಸಿದ ಸಿಎಂ, 'ನಿನಗೆ 100 ರುಪಾಯಿ ನೋಟ್ ಗಳು ಬೇಕು ಅಂತ ನನಗೆ ಗೊತ್ತು. 2000 ರುಪಾಯಿ ನೋಟ್ ನೀಡುವುದರಿಂದ ನಿನ್ನ ಸಮಸ್ಯೆ ಪರಿಹಾರವಾಗಲ್ಲ' ಎಂದರು. ಅಲ್ಲದೆ 2000 ರುಪಾಯಿ ನೋಟ್ ತಿರಸ್ಕರಿಸುವಂತೆ ಜನತೆಗೆ ಸೂಚಿಸಿದರು.
ಇದಕ್ಕು ಮುನ್ನ ಈ ಸಂಬಂಧ ಟ್ವೀಟರ್ ಮೂಲಕ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟು ಮೇಲಿನ ನಿಷೇಧ ಹೇರಿಕೆಯಿಂದಾಗಿ ಕೇವಲ ಸಾಮಾನ್ಯ ಜನರಿಗಷ್ಟೇ ಸಂಕಷ್ಟ ಎದುರಾಗಿದೆ. ಕಾಳಧನಿಕರಿಗೆ ಇದು ಸಹಾಯಕವಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ ಕೇಂದ್ರ ಸರ್ಕಾರ ತನ್ನ ಕೆಟ್ಟ ರಾಜಕೀಯ ನಿರ್ಧಾವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT