ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ 
ದೇಶ

ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು ಮೋದಿ ಕಣ್ಣೀರಲ್ಲ: ಮನೀಷ್ ಸಿಸೋಡಿಯಾ

ಪ್ರಸ್ತುತ ದೇಶದಲ್ಲಿರುವ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು, ಪ್ರಧನಮಂತ್ರಿ ನರೇಂದ್ರ ಮೋದಿಯವರ ಕಣ್ಣೀರು ದೇಶಕ್ಕೆ ಬೇಕಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...

ನವದೆಹಲಿ: ಪ್ರಸ್ತುತ ದೇಶದಲ್ಲಿರುವ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು, ಪ್ರಧನಮಂತ್ರಿ ನರೇಂದ್ರ ಮೋದಿಯವರ ಕಣ್ಣೀರು ದೇಶಕ್ಕೆ ಬೇಕಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಸೋಮವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಗೋವಾದಲ್ಲಿ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿ ಮೊದಲ ಬಾರಿಗೆ ನೋಟು ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿಯವರು, ದೇಶಕ್ಕಾಗಿಯೇ ನಾನು ನನ್ನ ಕುಟುಂಬ ಹಾಗೂ ಮನೆಯನ್ನು ತೊರೆದೆ ಎಂದು ಭಾವುಕರಾಗಿ ಮಾತನಾಡಿದ್ದರು.

ಈ ಹೇಳಿಕೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಮನೀಷ್ ಸಿಸೋಡಿಯಾ ಅವರು, ದುಬಾರಿ ನೋಟಿನ ಮೇಲೆ ನಿಷೇಧ ಹೇರಿಕೆಯಿಂದಾದಿ ಜನರು ಹಣಕ್ಕಾಗಿ ಸಂಕಷ್ಟವನ್ನು ಪಡುತ್ತಿದ್ದಾರೆ. ಎಟಿಎಂ ಹಾಗೂ ಬ್ಯಾಂಕ್ ಗಳಲ್ಲಿ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರ, ವ್ಯವಹಾರ ವಹಿವಾಟುಗಳ ಮೇಲೆ ಪರಿಣಾಮ ಬೀರಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದ ಜನತೆಗೆ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು ಪ್ರಧಾನಿ ಮೋದಿಯವರ ಕಣ್ಣೀರಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT