ಕಲಾಪದಲ್ಲಿ ಪ್ರಸ್ತಾಪಿಸುವ ವಿಷಯಗಳ ಕುರಿತು ಕಾರ್ಯತಂತ್ರ ರೂಪಿಸಲು ಸಭೆ ಸೇರಿದ ಪ್ರತಿಪಕ್ಷಗಳ ನಾಯಕರು 
ದೇಶ

ನಾಳೆಯಿಂದ ಸಂಸತ್ತಿನ ಚಳಿಗಾಲ ಅಧಿವೇಶನ: ಕಲಾಪಕ್ಕೆ ಬಿಸಿ ಮುಟ್ಟಿಸಲಿರುವ ನೋಟುಗಳ ನಿಷೇಧ

ನಾಳೆ(ನವೆಂಬರ್ 16) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಸಂದರ್ಭದಲ್ಲಿ...

ನವದೆಹಲಿ: ನಾಳೆ(ನವೆಂಬರ್ 16) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಮತ್ತು ಇತರ ಏಳು ಪ್ರತಿಪಕ್ಷಗಳು ನಿನ್ನೆ ಸಭೆ ಸೇರಿ ಜಂಟಿ ಕಾರ್ಯತಂತ್ರವನ್ನು ರೂಪಿಸಿವೆ. ನೋಟುಗಳ ಅಪಮೌಲೀಕರಣದಿಂದ ದೇಶದ ಸಾಮಾನ್ಯ ಮತ್ತು ಬಡಜನತೆಗೆ ಭಾರೀ ತೊಂದರೆಯುಂಟಾಗಿದೆ ಎಂದು ಸರ್ಕಾರವನ್ನು ತೀವ್ರ ತರಾಟೆಗೆ ಅವು ತೆಗೆದುಕೊಳ್ಳಲಿವೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆಯ ಕಾಂಗ್ರೆಸ್ ಉಪ ನಾಯಕ ಆನಂದ್ ಶರ್ಮಾ, ಸಂಸತ್ತಿನಲ್ಲಿ ನೋಟುಗಳ ನಿಷೇಧ ವಿಷಯವನ್ನು ಪ್ರಸ್ತಾಪಿಸಬೇಕೆಂದು ಎಲ್ಲಾ ಪಕ್ಷಗಳ ಸದಸ್ಯರು ಸಹಮತದಿಂದ ಒಪ್ಪಿಗೆ ನೀಡಿದರು ಎಂದರು.
ನಿನ್ನೆಯ ಸಭೆಗೆ ಹೆಚ್ಚಿನ ನಾಯಕರು ಗೈರು ಹಾಜರಾದ್ದರಿಂದ ಇಂದು ಅಪರಾಹ್ನ ಮತ್ತೆ ಸಭೆ ಸೇರಿ ತಮ್ಮ ಯೋಜನೆಗಳನ್ನು ಅಂತಿಮಗೊಳಿಸಲಿದ್ದಾರೆ. ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಉತ್ತರ ಪ್ರದೇಶ ಚುನಾವಣೆಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ನಿನ್ನೆಯ ಸಭೆಗೆ ಡಿಎಂಕೆ, ಎಡಿಎಂಕೆ, ಎನ್ ಸಿಪಿ, ಎಎಪಿ ಪಕ್ಷಗಳ ನಾಯಕರು ಭಾಗವಹಿಸಿರಲಿಲ್ಲ.
ಸಭೆಯಲ್ಲಿ ಹಾಜರಾಗಿದ್ದ ಜೆಡಿಯು ನಾಯಕ ಶರದ್ ಯಾದವ್, ಭೂ ಸ್ವಾಧೀನ ಕಾಯಿದೆಯಲ್ಲಿ ವಿರೋಧ ಪಕ್ಷಗಳ ನಾಯಕರೆಲ್ಲಾ ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದಾಗ ಮೋದಿ ಸರ್ಕಾರ ಕರಡು ಮಸೂದೆಯನ್ನು ಪ್ರತಿಪಕ್ಷಗಳ ಸಮಾಧಾನಕ್ಕೆ ತಕ್ಕಂತೆ ಬದಲಾಯಿಸಿತ್ತು. ಈ ಸಲವೂ ನೋಟುಗಳ ನಿಷೇಧ ವಿಷಯದಲ್ಲಿ ಅದೇ ರೀತಿ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಸರ್ಕಾರದ ನಿರ್ಣಯವನ್ನು ಪ್ರತಿಭಟಿಸಲಿವೆ ಎಂದು ಭಾವಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT