ಸಂಗ್ರಹ ಚಿತ್ರ 
ದೇಶ

ಎಟಿಎಂಗಳಲ್ಲಿ 20 ಮತ್ತು 50 ರು. ನೋಟುಗಳು ಶೀಘ್ರದಲ್ಲೇ: ಎಸ್ ಬಿಐ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ

ಶೀಘ್ರದಲ್ಲೇ ಎಸ್ ಬಿಐ ಎಟಿಎಂಗಳಲ್ಲಿ 20 ಮತ್ತು 50 ರು. ಮುಖಬೆಲೆಯ ನೋಟುಗಳು ಲಭ್ಯವಾಗಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಹೇಳಿದ್ದಾರೆ.

ಮುಂಬೈ: ಶೀಘ್ರದಲ್ಲೇ ಎಸ್ ಬಿಐ ಎಟಿಎಂಗಳಲ್ಲಿ 20 ಮತ್ತು 50 ರು. ಮುಖಬೆಲೆಯ ನೋಟುಗಳು ಲಭ್ಯವಾಗಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಹೇಳಿದ್ದಾರೆ.

ನೋಟು ನಿಷೇಧ ಬಳಿಕ ದೇಶಾದ್ಯಂತ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ತಹಬದಿಗೆ ತರುವ ನಿಟ್ಟಿನಲ್ಲಿ ಆರ್ ಬಿಐ ಸೇರಿದಂತೆ ವಿವಿಧ ಬ್ಯಾಂಕುಗಳ ಹರಸಾಹಸ ಪಡುತ್ತಿದ್ದು, ನೋಟು ನಿಷೇಧದ ಬಳಿಕ ಉಂಟಾಗಿರುವ ಚಿಲ್ಲರೆ  ಸಮಸ್ಯೆ ಪರಿಹಾರಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದಷ್ಟು ಕ್ರಮಗಳನ್ನು ಕೈಗೊಂಡಿದೆ. ಅದರಂತೆ ಕೆಲವೇ ದಿನಗಳಲ್ಲಿ ಎಸ್ ಬಿಐ ನ ಎಟಿಎಂಗಳಲ್ಲಿ 20 ಹಾಗೂ 50 ರು.ಗಳ ನೋಟುಗಳು ಲಭ್ಯವಾಗಲಿದೆ ಎಂದು  ತಿಳಿದಬಂದಿದೆ.

ಈ ಬಗ್ಗೆ ಸ್ವತಃ ಎಸ್ ಬಿಐನ ಮುಖ್ಯಸ್ಥ ಅರುಂಧತಿ ಭಟ್ಟಾಚಾರ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಎಟಿಎಂಗಳಲ್ಲಿ 20 ಮತ್ತು 50 ರುಗಳ ನೋಟುಗಳ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ನೋಟು ನಿಷೇಧದ  ಬಳಿಕ ಎಟಿಎಂಗಳ ಕಾರ್ಯನಿರ್ಹವಣೆಯಲ್ಲಿ ಶೇ.50ರಷ್ಚು ಮಾತ್ರ ವ್ಯವಹಾರ ನಡೆಯುತ್ತಿದ್ದು, ಶೀಘ್ರದಲ್ಲೇ ಕಡಿಮೆ ಮೌಲ್ಯದ ನೋಟುಗಳನ್ನು ಎಟಿಎಂಗಳಲ್ಲಿ ಭರ್ತಿ ಮಾಡುವುದಾಗಿ ಅವರು ಹೇಳಿದ್ದಾರೆ.

"ನೋಟು ನಿಷೇಧ ಬಳಿಕ ದೇಶಾದ್ಯಂತ ಚಿಲ್ಲರೆ ಸಮಸ್ಯೆ ವ್ಯಾಪಕವಾಗಿದ್ದು, ಚಿಲ್ಲರೆ ಸಿಗದೇ ಜನ ಕಂಗಾಲಾಗಿದ್ದಾರೆ. ಹೀಗಾಗಿ ಎಟಿಎಂಗಳಲ್ಲಿ 20 ಮತ್ತು 50ರು.ಗಳ ನೋಟುಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಶೀಘ್ರದಲ್ಲೇ  ಎಸ್ ಬಿಐ ಎಟಿಎಂಗಳಲ್ಲಿ ಕಡಿಮೆ ಮೌಲ್ಯದ ನೋಟುಗಳು ಲಭ್ಯವಾಗಲಿವೆ. ನವೆಂಬರ್ ಅಂತ್ಯಕ್ಕೆ ಪ್ರಸ್ತುತ ಎದುರಾಗಿರುವ ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಎಟಿಎಂ ಕಾರ್ಯ ವೀಕ್ಷಣೆಗೆ ತಂಡ ರಚಿಸಿದ ಕೇಂದ್ರ
ಇದೇ ವೇಳೆ ದೇಶದ ಎಲ್ಲ ಎಟಿಎಂಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿವಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ವಿಶೇಷ ಕಾರ್ಯಪಡೆ ತಂಡವನ್ನು ರಚಿಸಿದ್ದು, ಈ ತಂಡದಲ್ಲಿ ಆರ್ ಬಿಐ ನ ಕೆಲ ಅಧಿಕಾರಿಗಳು ಕೂಡ  ಸೇರಿದ್ದಾರೆ ಎಂದು ತಿಳಿದುಬಂದಿದೆ. ಎಟಿಎಂಗಳ ಕಾರ್ಯನಿರ್ವಹಣೆ ಮತ್ತು ಹಣ ಭರ್ತಿ ಕುರಿತಂತೆ ಈ ತಂಡ ಮೇಲ್ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT