ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಾಂಡ್: ಉದ್ಯಮಿಯನ್ನು ಕೊಂದು ವಾಹನಕ್ಕೆ ಬೆಂಕಿ ಇಟ್ಟ ನಕ್ಸಲರು

ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂದು ಶಂಕಿಸಿ ಉದ್ಯಮಿಯೊಬ್ಬರನ್ನು ನಕ್ಸಲರ ಗುಂಪೊಂದು ಹತ್ಯೆ ಮಾಡಿ, ನಂತರ ಆತನ ಕಾರಿಗೆ ಬೆಂಕಿ ಹಚ್ಚಿರುವ ಘಟನೆಯೊಂದು ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ...

ಜಮ್ಶೆಡ್ಪುರ: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂದು ಶಂಕಿಸಿ ಉದ್ಯಮಿಯೊಬ್ಬರನ್ನು ನಕ್ಸಲರ ಗುಂಪೊಂದು ಹತ್ಯೆ ಮಾಡಿ, ನಂತರ ಆತನ ಕಾರಿಗೆ ಬೆಂಕಿ ಹಚ್ಚಿರುವ ಘಟನೆಯೊಂದು ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಯೋಗೇಶ್ ಮಿಶ್ರ (40) ಮೃತ ಉದ್ಯಮಿಯಾಗಿದ್ದು, ಈತ ಹಲವು ವರ್ಷಗಳಿಂದಲೂ ನರ್ಸಿಂಗ್ ಹೋಮ್ ವೊಂದನ್ನು ನಡೆಸುತ್ತಿದ್ದ. ಅಲ್ಲದೆ, ನಕ್ಸಲರೊದಿಗೆ ಸಂಪರ್ಕವನ್ನು ಹೊಂದಿದ್ದ ಎಂದು ತಿಳಿದುಬಂದಿದೆ.

ಕಳೆದ ರಾತ್ರಿ ತಮ್ಮ ನರ್ಸಿಂಗ್ ಹೋಮ್ ನಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರನ್ನು ಕರೆದುಕೊಂಡು ಕಾರಿನಲ್ಲಿ ಹೋಗುತ್ತಿದ್ದ ವೇಳೆ ಕಾರನ್ನು ಅಡ್ಡಗಟ್ಟಿರುವ ನಕ್ಸಲರು ಯೋಗೇಶ್ ಮಿಶ್ರ ಅವರನ್ನು ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ನರ್ಸ್ ಕುಳಿತಿದ್ದ ವೇಳೆಯೇ ಕಾರಿಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯೋಗೇಶ್ ಮಿಶ್ರ ಅವರು ನಕ್ಸಲರೊಂದಿಗೆ ಸಂಪರ್ಕವನ್ನು ಹೊಂದಿದ್ದ. ನರ್ಸಿಂಗ್ ಹೋಂನಿಂದ ಕಳೆದ ರಾತ್ರಿ ಹೊರಡುವಾಗಲೂ ಫೋನಿನಲ್ಲಿ ನಕ್ಸಲರೊಂದಿಗೆ ಮಾತಾನಾಡಿದ್ದ. ಯೋಗೇಶ್ ನಕ್ಸಲರೊಂದಿಗೆ ಸಂಪರ್ಕ ಹೊಂದಿದ್ದ ಎಂಬುದನ್ನು ಅವರ ಕುಟುಂಬಸ್ಥರೂ ಕೂಡ ದೃಢಪಡಿಸಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರು.500 ಹಾಗೂ 1,000 ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದ ಬಳಿಕ ನಕ್ಸಲರ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಬ್ಲಾಕ್ ಮನಿಯನ್ನು ವೈಟ್ ಮನಿ ಮಾಡಿಕೊಡುವಂತೆ ನಕ್ಸಲರು ಯೋಗೇಶ್ ನನ್ನು ಪೀಡಿಸಿರಬಹುದು, ಇಲ್ಲವೇ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂದು ಶಂಕಿಸಿಯೂ ಆತನನ್ನು ಹತ್ಯೆ ಮಾಡಿರಬಹುದು. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು. ಎಲ್ಲಾ ರೀತಿಯ ಆಯಾಮದಲ್ಲಿಯೂ ಪರಿಶೀಲನೆ ನಡೆಸಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!