ಸಾಂದರ್ಭಿಕ ಚಿತ್ರ 
ದೇಶ

ಎಟಿಎಂಗೆ ಹಾಕಲು ನೀಡಿದ್ದ ಹೊಸ ನೋಟುಗಳೊಂದಿಗೆ ಬ್ಯಾಂಕರ್ ಪರಾರಿ!

ಎಟಿಎಂಗೆ ಹಾಕಲು ನೀಡಲಾಗಿದ್ದ ಸುಮಾರು 6.98 ಲಕ್ಷ ಮೌಲ್ಯದ ಹೊಸ ನೋಟುಗಳನ್ನು ಬ್ಯಾಂಕರ್ ಓರ್ವ ಕದ್ದು ಪರಾರಿಯಾಗಿರುವ ಘಟನೆ ಪಂಜಾಬ್ ಮೊಹಾಲಿಯಲ್ಲಿ ನಡೆದಿದೆ.

ಮೊಹಾಲಿ: ಎಟಿಎಂಗೆ ಹಾಕಲು ನೀಡಲಾಗಿದ್ದ ಸುಮಾರು 6.98 ಲಕ್ಷ ಮೌಲ್ಯದ ಹೊಸ ನೋಟುಗಳನ್ನು ಬ್ಯಾಂಕರ್ ಓರ್ವ ಕದ್ದು ಪರಾರಿಯಾಗಿರುವ ಘಟನೆ ಪಂಜಾಬ್ ಮೊಹಾಲಿಯಲ್ಲಿ ನಡೆದಿದೆ.

ದೇಶಾದ್ಯಂತ ಹೊಸ ನೋಟುಗಳಿಗೆ ಜನತೆ ಭವಣೆ ಪಡುತ್ತಿರುವಂತೆಯೇ ಇತ್ತ ಮೊಹಾಲಿಯಲ್ಲಿ ಬ್ಯಾಂಕ್ ನೌಕರನೋರ್ವ ಎಟಿಎಂಗೆ ತುಂಬಿಸಲು ನೀಡಲಾಗಿದ್ದ ಹಣದೊಂದಿಗೆ ಪರಾರಿಯಾಗಿದ್ದಾನೆ. ಪರಾರಿಯಾದ ಬ್ಯಾಂಕ್  ನೌಕರನನ್ನು ಪಂಜಾಬ್ ಮತ್ತು ಸಿಂದ್ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ತೇಜ್ ಪ್ರತಾಪ್ ಸಿಂಗ್ ಭಾಟಿಯಾ ಎಂದು ಗುರುತಿಸಲಾಗಿದೆ. ಮೊಹಾಲಿ ಜಿಲ್ಲೆಯ ಡೆರಬಾಸ್ಸಿ ತಾಲ್ಲೂಕಿನ ಬಂಕಾರ್ಪುರ್ ಹಳ್ಳಿಯಲ್ಲಿ ಎಟಿಎಂಗೆ ಹಣ  ತುಂಬಿಸುವಂತೆ ನೀಡಲಾಗಿದ್ದ ಸುಮಾರು 6.98 ಲಕ್ಷ ಮೌಲ್ಯದ ಹಣವನ್ನು ತೇಜ್ ಪ್ರತಾಪ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಎಟಿಎಂಗೆ ಹಣ ತುಂಬಿಸುವ ಪ್ರಕ್ರಿಯೆ ವೇಳೆ ವೀಕ್ಷಣೆ ಮಾಡಲು ತೇಜ್ ಪ್ರತಾಪ್ ನನ್ನು ನೇಮಿಸಲಾಗಿತ್ತು. ಈ ವೇಳೆ ಓರ್ವ ಭದ್ರತಾ ಅಧಿಕಾರಿ, ಓರ್ವ ಇಂಜಿನಿಯರ್ ನೊಂದಿಗೆ ಎಟಿಎಂಗೆ ಆಗಮಿಸಿದ ತೇಜ್ ಪ್ರತಾಪ್  ಇಂಜಿನಿಯರ್ ಎಟಿಎಂ ತೆರೆಯುತ್ತಿರುವಾಗ ಭದ್ರತಾ ಸಿಬ್ಬಂದಿ ಆತನಿಗೆ ಸಹಾಯ ಮಾಡುತ್ತಿದ್ದ. ಇದನ್ನೇ ತನ್ನ ದುಷ್ಕ್ಕೃತ್ಯಕ್ಕೆ ಬಳಸಿಕೊಂಡ ತೇಜ್ ಪ್ರತಾಪ್ ಸಿಬ್ಬಂದಿಗಳು ಕೆಲಸದಲ್ಲಿ ಮಗ್ನರಾಗಿದ್ದಾಗ ಹಣದ ಬಾಕ್ಸ್ ನೊಂದಿಗೆ  ತನ್ನ ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪ್ರಸ್ತುತ ಕಳ್ಳ ಬ್ಯಾಂಕರ್ ವಿರುದ್ಧ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಆಡಳಿತ ಮಂಡಳಿ ಡೆರಬಸ್ಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT