ದೇಶ

ಸುಷ್ಮಾ ಸ್ವರಾಜ್ ಗೆ ಕಿಡ್ನಿ ನೀಡಲು ಸಿದ್ಧ ಎಂದ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ!

ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಗೆ ಕಿಡ್ನಿ ನೀಡಲು ಸಿದ್ಧ ಎಂದು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ ಅಹ್ಮರ್ ಮುಸ್ತಿಖಾನ್ ಹೇಳಿದ್ದಾರೆ.

ನವದೆಹಲಿ: ಕಿಡ್ನಿ ವೈಫಲ್ಯದಿಂದ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಗೆ ಕಿಡ್ನಿ ನೀಡಲು ಸಿದ್ಧ ಎಂದು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ ಅಹ್ಮರ್ ಮುಸ್ತಿಖಾನ್ ಹೇಳಿದ್ದಾರೆ. 
ಸುಷ್ಮಾ ಸ್ವರಾಜ್ ಅವರ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿರುವ ಅಹ್ಮರ್ ಮುಸ್ತಿಖಾನ್, ಬಲೂಚ್ ನ ನಾಗರಿಕನ ಕಿಡ್ನಿ ಸುಷ್ಮಾ ಸ್ವರಾಜ್ ಅವರಿಗೆ ಹೊಂದಾಣಿಕೆಯಾಗುವುದಿದ್ದರೆ, ನನ್ನ ಸಹೋದರಿಗೆ ನನ್ನ ಕಿಡ್ನಿ ನೀಡಲು ಸಿದ್ಧ ಎಂದು ಹೇಳಿದ್ದಾರೆ. 
ಎಂಡೋಕ್ರಾನಿಕಲ್ ಪರೀಕ್ಷೆಗಳಿಗಾಗಿ ನವೆಂಬರ್ 7 ರಂದು ಸುಷ್ಮಾ ಸ್ವರಾಜ್ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. "ಸುಷ್ಮಾ ಅವರಿಗೆ ಡಯಾಬೆಟಿಸ್ ತೊಂದರೆ ಇದೆ ಆದುದರಿಂದ ಅವರ ಕಿಡ್ನಿಗೆ ತೊಂದರೆಯಾಗಿದೆ. ಅವರು ಈಗ ಡಯಾಲಿಸಿಸ್ ಗೆ ಒಳಗಾಗಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ" ಎಂದು ಎಐಐಎಂಎಸ್ ವೈದ್ಯರು ಹೇಳಿದ್ದಾರೆ.  ಸುಷ್ಮಾ ಸ್ವರಾಜ್ ಅವರಿಗೆ ಕಿಡ್ನಿ ಅಗತ್ಯವಿದ್ದರೆ ತಮ್ಮ ಕಿಡ್ನಿಯನ್ನು ನೀಡಲು ಸಿದ್ಧ ಎಂದು ಹೇಳಿರುವ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ ಅಹ್ಮರ್ ಮುಸ್ತಿಖಾನ್, ಬಲೂಚಿಸ್ತಾನದ ಸ್ವಾತಂತ್ರ್ಯ ಹೋರಾಟದ ಪರವಾಗಿ ಭಾರತ ಮಧ್ಯಪ್ರವೇಶಿಸಿ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಬಲೂಚ್ ಸ್ವಾತಂತ್ರ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದ ಮೊದಲ ವ್ಯಕ್ತಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT