ಅರುಣ್ ಜೇಟ್ಲಿ 
ದೇಶ

1000 ಮುಖಬೆಲೆಯ ನೋಟುಗಳ ಮರು ಚಲಾವಣೆ ಇಲ್ಲ: ಅರುಣ್ ಜೇಟ್ಲಿ

1000 ಮುಖ ಬೆಲೆಯ ನೋಟುಗಳನ್ನು ಮರು ಚಲಾವಣೆ ಮಾಡುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ....

ನವದೆಹಲಿ: 1000 ಮುಖ ಬೆಲೆಯ ನೋಟುಗಳನ್ನು ಮರು ಚಲಾವಣೆ ಮಾಡುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. 
ನಿಷೇಧಿತ 500-1000 ಮುಖಬೆಲೆಯ ನೋಟುಗಳನ್ನು ನೀಡಿ 4500 ರುಪಾಯಿ ವಿನಿಮಯ ಮಾಡಿಕೊಳ್ಳುವುದರಿಂದ ಹಣ ದುರುಪಯೋಗ ಸ್ಧಗಿತಗೊಳಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ದಿನಗಳಲ್ಲಿ 1000 ನೋಟುಗಳ ಮರು ಚಲಾವಣೆ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪ್ರಸ್ತುತ 22,500 ಎಟಿಎಂಗಳನ್ನು ಮರು ಮಾಪನಾಂಕ ಮಾಡಲಾಗಿದೆ ಎಂದು ಅರುಣ್ ಜೇಟ್ಲಿ ಹೇಳಿದರು. 
ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಣಕಾಸು ಇಲಾಖೆ ಕಾರ್ಯದರ್ಶಿ ಶಶಿಕಾಂತ್ ದಾಸ್ ಸದ್ಯ 500-1000 ಮುಖಬೆಲೆಯ ನೋಟುಗಳ ಚಲಾವಣೆ ಹಿಂತೆಗೆದಿರುವುದರಿಂದ ಉಂಟಾಗಿರುವ ಹಣಕಾಸು ವ್ಯವಹಾರಗಳ ತೊಂದರೆ ನಿವಾರಣೆಗೆ ಹಲವು ಬದಲಾವಣೆ ಮಾಡಿಕೊಳ್ಳಲು ಕೇಂದ್ರ ತೀರ್ಮಾನಿಸಿದೆ. ಅದರಂತೆ ರೈತರು ಕೃಷಿಸಾಲ ಖಾತೆಯಿಂದ 25 ಸಾವಿರ ಪಡೆಯಬಹುದು. ಕೃಷಿ ಉತ್ಪನ್ನ ವ್ಯಾಪಾರಗಳಿಗೆ 50 ಸಾವಿರ ತೆಗೆಯಬಹುದು. ಮದುವೆಗೆ 2.5 ಲಕ್ಷವರೆಗಿನ ಮೊತ್ತವನ್ನು ಬ್ಯಾಂಕ್ ಖಾತೆಗಳಿಂದ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿ ನಿಯಮಗಳನ್ನು ಮಾರ್ಪಾಡು ಮಾಡಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT