ಅರುಣ್ ಜೇಟ್ಲಿ 
ದೇಶ

1000 ಮುಖಬೆಲೆಯ ನೋಟುಗಳ ಮರು ಚಲಾವಣೆ ಇಲ್ಲ: ಅರುಣ್ ಜೇಟ್ಲಿ

1000 ಮುಖ ಬೆಲೆಯ ನೋಟುಗಳನ್ನು ಮರು ಚಲಾವಣೆ ಮಾಡುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ....

ನವದೆಹಲಿ: 1000 ಮುಖ ಬೆಲೆಯ ನೋಟುಗಳನ್ನು ಮರು ಚಲಾವಣೆ ಮಾಡುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. 
ನಿಷೇಧಿತ 500-1000 ಮುಖಬೆಲೆಯ ನೋಟುಗಳನ್ನು ನೀಡಿ 4500 ರುಪಾಯಿ ವಿನಿಮಯ ಮಾಡಿಕೊಳ್ಳುವುದರಿಂದ ಹಣ ದುರುಪಯೋಗ ಸ್ಧಗಿತಗೊಳಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ದಿನಗಳಲ್ಲಿ 1000 ನೋಟುಗಳ ಮರು ಚಲಾವಣೆ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪ್ರಸ್ತುತ 22,500 ಎಟಿಎಂಗಳನ್ನು ಮರು ಮಾಪನಾಂಕ ಮಾಡಲಾಗಿದೆ ಎಂದು ಅರುಣ್ ಜೇಟ್ಲಿ ಹೇಳಿದರು. 
ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಣಕಾಸು ಇಲಾಖೆ ಕಾರ್ಯದರ್ಶಿ ಶಶಿಕಾಂತ್ ದಾಸ್ ಸದ್ಯ 500-1000 ಮುಖಬೆಲೆಯ ನೋಟುಗಳ ಚಲಾವಣೆ ಹಿಂತೆಗೆದಿರುವುದರಿಂದ ಉಂಟಾಗಿರುವ ಹಣಕಾಸು ವ್ಯವಹಾರಗಳ ತೊಂದರೆ ನಿವಾರಣೆಗೆ ಹಲವು ಬದಲಾವಣೆ ಮಾಡಿಕೊಳ್ಳಲು ಕೇಂದ್ರ ತೀರ್ಮಾನಿಸಿದೆ. ಅದರಂತೆ ರೈತರು ಕೃಷಿಸಾಲ ಖಾತೆಯಿಂದ 25 ಸಾವಿರ ಪಡೆಯಬಹುದು. ಕೃಷಿ ಉತ್ಪನ್ನ ವ್ಯಾಪಾರಗಳಿಗೆ 50 ಸಾವಿರ ತೆಗೆಯಬಹುದು. ಮದುವೆಗೆ 2.5 ಲಕ್ಷವರೆಗಿನ ಮೊತ್ತವನ್ನು ಬ್ಯಾಂಕ್ ಖಾತೆಗಳಿಂದ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿ ನಿಯಮಗಳನ್ನು ಮಾರ್ಪಾಡು ಮಾಡಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT