ಮಾಯಾವತಿ (ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ಸದನಕ್ಕೆ ಬರುವವರೆಗೂ ನೋಟುಗಳ ರದ್ದತಿ ಬಗ್ಗೆ ಚರ್ಚೆಗೆ ಅವಕಾಶ ನೀಡಲ್ಲ: ಮಾಯಾವತಿ

ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ನೋಟು ರದ್ದತಿ ವಿಷಯದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ...

ನವದೆಹಲಿ: 500, 1000 ರೂ  ನೋಟುಗಳ ರದ್ದತಿಯ ಪರಿಣಾಮದ ಬಗ್ಗೆ ಕೇಂದ್ರ ಸರ್ಕಾರ ಊದಾಸೀನತೆ ತೋರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ನೋಟು ರದ್ದತಿ ವಿಷಯದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಎಚ್ಚರಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ಚರ್ಚೆಗೆ ಅವಕಾಶ ನೀಡಬಾರದು ಎಂಬ ತೀರ್ಮಾವನ್ನು ಪ್ರತಿಪಕ್ಷಗಳು ತೆಗೆದುಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಘೋಷಣೆಯಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗಿರುವುದರ ಬಗ್ಗೆ ಗಂಭೀರವಾಗಿ ಯೋಚಿಸುವುದೇ ಆದರೆ ಅವರು ಸದನಕ್ಕೆ ಬಂದು ಮಾತನಾಡಲಿ ಎಂದು ಮಾಯಾವತಿ ಆಗ್ರಹಿಸಿದ್ದಾರೆ. 
ಜನಸಾಮಾನ್ಯರು ಅನುಭವಿಸುತ್ತಿರುವ ಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಜನಸಾಮಾನ್ಯವರ ನೋವು ಇವರಿಗೆ ಅರ್ಥವಾಗುತ್ತಿಲ್ಲ ಎಂದು ಮಾಯಾವತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಸದನಕ್ಕೆ ಬಂದ ನಂತರವೇ ನೋಟು ನಿಷೇಧದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂಬ ಬಿಎಸ್ ಪಿ ನಿರ್ಣಯವನ್ನು ಬಹುತೇಕ ಪ್ರತಿಪಕ್ಷಗಳು ಸ್ವಾಗತಿಸಿವೆ ಎಂದು ಮಾಯಾವತಿ ಇದೇ ವೇಳೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT