ಸಾಂದರ್ಭಿಕ ಚಿತ್ರ 
ದೇಶ

ಶ್ರೀಲಂಕಾ ನೌಕಾಪಡೆಯಿಂದ ಗುಂಡಿನ ದಾಳಿ: 2 ಭಾರತೀಯ ಮೀನುಗಾರರಿಗೆ ಗಾಯ

ಜಲಗಡಿ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಭಾರತೀಯ ಮೀನುಗಾರರಿಗೆ ಗಂಭೀರವಾಗಿ...

ಚೆನ್ನೈ: ಜಲಗಡಿ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಭಾರತೀಯ ಮೀನುಗಾರರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಮಿಳುನಾಡು ಮೂಲದ ಮೀನುಗಾರರದಾ ದಿನೇಶ್ ಮತ್ತು ಅರವಿಂದ್ ಎಂಬುವವರು ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.

ಗಾಯಗೊಂಡಿರುವವರನ್ನು ಪುದುಚೇರಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

9 ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಈ ವೇಳೆ ಶ್ರೀಲಂಕಾ ನೌಕಾಪಡೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಮೀನುಗಾರರು ಬೋಟಿನ ಹಿಂದೆ ಅವಿತುಗೊಂಡಿದ್ದಾರೆ. ಈ ವೇಳೆ ಇಬ್ಬರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಗುಂಡಿನ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮೀನುಗಾರರೊಬ್ಬರು, ಮೀನು ಹಿಡಿಯಲು ಭಾನುವಾರ ರಾತ್ರಿ ಸಮುದ್ರ ತೀರಕ್ಕೆ ಹೋಗಿದ್ದೆವು. ಎರಡು ದಿನಗಳ ಬಳಿಕ ಹಿಂತಿರುಗಿ ಬರುವಾಗ ಶ್ರೀಲಂಕಾ ನೌಕಾಪಡೆಯ ಅಧಿಕಾರಿಯೊಬ್ಬರು ನಿಧಾನಗತಿಯಲ್ಲಿ ಹೋಗುವಂತೆ ತಿಳಿಸಿದ್ದರು. ಇದಕ್ಕೆ ನಾವು ನಕಾರ ವ್ಯಕ್ತಪಡಿಸಿದಾಗ ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದ್ದರು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT