ಏರ್ ಇಂಡಿಯಾ ವಿಮಾನದಲ್ಲಿ ನೀಡಿದ್ಧ ಊಟದಲ್ಲಿ ಪತ್ತೆಯಾದ ಜಿರಳೆ 
ದೇಶ

ಏರ್ ಇಂಡಿಯಾ ವಿಮಾನದ ಊಟದಲ್ಲಿ ಸತ್ತ ಜಿರಳೆ ಪತ್ತೆ

ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಊಟದಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ....

ಹೈದರಾಬಾದ್: ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಊಟದಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ.

ಹೈದರಾಬಾದ್‌ನಿಂದ ನವದೆಹಲಿಮೂಲಕ ಶಿಕಾಗೊಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ನಡೆದಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿಮಾನಯಾನ ಸಂಸ್ಥೆ ತನಿಖೆಗೆ ಆದೇಶಿಸಿದೆ.

ವಿಮಾನದಲ್ಲಿ ಆಹಾರ ಸರಬರಾಜು ನಿರ್ವಹಿಸುತ್ತಿರುವ ಕೇಟರರ್‌ಗೂ ತಕ್ಷಣ ನೋಟಿಸ್‌ ನೀಡಿದೆ. ಸಂತ್ರಸ್ತ ಪ್ರಯಾಣಿಕ ರಾಹುಲ್‌ ರಘುವಂಶಿ ಅವರು ಊಟದಲ್ಲಿ ಜಿರಳೆ ಇರುವುದನ್ನು ಚಿತ್ರ ಸಮೇತ ಟ್ವೀಟ್‌ ಮಾಡಿದ್ದಾರೆ.

ಏರ್‌ ಇಂಡಿಯಾವು ಈ ಪ್ರಮಾದಕ್ಕಾಗಿ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದೆ. ಜೊತೆಗೆ ಮುಂಬಯಿ ಮೂಲದ ಗೌರಮೇಟ್ ಸಂಸ್ಥೆಗೆ 1 ಲಕ್ಷ ರೂ ದಂಡ ನೀಡಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT