ಕಾಂಗ್ರೆಸ್ ನಾಯಕ ಶಶಿ ತರೂರ್ 
ದೇಶ

ಪಾಕ್ ಕಲಾವಿದರನ್ನು ಮತ್ತೆ ಭಾರತಕ್ಕೆ ಆಹ್ವಾನಿಸಬೇಕು: ಶಶಿ ತರೂರ್

ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಬೇಕೆಂಬ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಗ್ರಹಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಾಕಿಸ್ತಾನ ಕಲಾವಿದರನ್ನು ಮತ್ತೆ ಭಾರತಕ್ಕೆ ಆಹ್ವಾನಿಸಬೇಕೆಂದು...

ಮುಂಬೈ: ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಬೇಕೆಂಬ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಗ್ರಹಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಾಕಿಸ್ತಾನ ಕಲಾವಿದರನ್ನು ಮತ್ತೆ ಭಾರತಕ್ಕೆ ಆಹ್ವಾನಿಸಬೇಕೆಂದು ಹೇಳಿದ್ದಾರೆ.

ಟಾಟಾ ಲಿಚರೇಚರ್ ಲೈವ್ ಫೆಸ್ಟಿವಲ್ ನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನ ನಟರನ್ನು ಭಾರತಕ್ಕೆ ಮತ್ತೆ ಆಹ್ವಾನಿಸಬೇಕು. ಇದರಿಂದ ದ್ವಿಪಕ್ಷೀಯ ಸಂಬಂಧಗಳು ಗಟ್ಟಿಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿರುವ ಸೃಜನಶೀಲ ಜನರು, ಕಲಾವಿದರು ಹಾಗೂ ಪ್ರಮಾಣಿಕ ಉದ್ಯಮಿಗಳನ್ನು ಭಾರತಕ್ಕೆ ಆಹ್ವಾನಿಸಬೇಕಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬರುವ ಜನರಿಗೆ ತವರಿನಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ. ಉಭಯ ದೇಶಗಳ ನಡುವಿನ ದ್ವೇಷ ನಮ್ಮ ಮನಃಸ್ಥಿತಿ ಮೂಲಕ ಬದಲಾಗಬೇಕೆ ವಿನಃ ನೀತಿಗಳ ಮೂಲಕವಲ್ಲ.

ಜನರ ನಡುವಿನ ಸಹಕಾರಗಳು ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಹೀಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬರುವ ಕಲಾವಿದರು, ಫ್ಯಾಶನ್ ಡಿಸೈನರ್ ಗಳು ಹಾಗೂ ಪ್ರಾಮಾಣಿಕ ಉದ್ಯಮಿಗಳಿಗೆ ತವರಿನ ರೀತಿಯಲ್ಲಿ ಭಾವನೆ ಹುಟ್ಟುವಂತೆ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ ಎಂದಿದ್ದಾರೆ.

ಇದೇ ವೇಳೆ ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ 'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದ ಕುರಿತಂತ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಮುಖ್ಯಮಂತ್ರಿಗಳು ಯಾರೂ ಈ ರೀತಿಯಾಗಿ ನಡೆದುಕೊಂಡಿರಲಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT