ಶೀಲಾ ದಿಕ್ಷಿತ್ 
ದೇಶ

ದೆಹಲಿ ಮಾಜಿ ಸಿಎಂ ಶೀಲಾ ದಿಕ್ಷಿತ್ ಅಳಿಯನಿಗೆ ಜಾಮೀನು ನೀಡಲು ದೆಹಲಿ ಕೋರ್ಟ್ ನಕಾರ

ಕಳ್ಳತನ ಹಾಗೂ ಪತ್ನಿಯ ಆಸ್ತಿ ದುರ್ಬಳಕೆ ಮಾಡಿಕೊಂಡ ಆರೋಪದ ಜೈಲು ಪಾಲಾಗಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರ....

ನವದೆಹಲಿ: ಕಳ್ಳತನ ಹಾಗೂ ಪತ್ನಿಯ ಆಸ್ತಿ ದುರ್ಬಳಕೆ ಮಾಡಿಕೊಂಡ ಆರೋಪದ ಜೈಲು ಪಾಲಾಗಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರ ಅಳಿಯನಿಗೆ ಜಾಮೀನು ನೀಡಲು ಶುಕ್ರವಾರ ದೆಹಲಿ ಕೋರ್ಟ್ ನಿರಾಕರಿಸಿದೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶೀಲಾ ದಿಕ್ಷಿತ್ ಅವರ ಮಗಳ ಗಂಡ ಸೈಯದ್ ಮೊಹಮ್ಮದ್ ಇಮ್ರಾನ್ ಅವರ ಜಾಮೀನು ಅರ್ಜಿಯನ್ನು ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಶರ್ಮಾ ಅವರು ವಜಾಗೊಳಿಸಿದ್ದಾರೆ. 
ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಅಲಸೂರು ಬಳಿ ಇಮ್ರಾನ್ ನನ್ನು ಬಂಧಿಸಿದ್ದರು. ಬಳಿಕ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಪಂಕಜ್ ಶರ್ಮಾ ಅವರು ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
1996ರಲ್ಲಿ ಸೈಯದ್ ಇಮ್ರಾನ್ ಅವರನ್ನು ಮದುವೆಯಾಗಿದ್ದ ಶೀಲಾ ದಿಕ್ಷಿತ ಅವರ ಮಗಳು ಲತಿಕಾ ಕಳೆದ 10 ತಿಂಗಳಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಇಮ್ರಾನ್ ವಿರುದ್ಧ ದೈಹಿಕ ಹಿಂಸೆ, ಕಳ್ಳತನ ಹಾಗೂ ಆಸ್ತಿ ದುರ್ಬಳಕೆ ಮಾಡಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT