ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜಯಂತಿ ಅಂಗವಾಗಿ ದೆಹಲಿಯಲ್ಲಿ ನಡೆದ ಗೌರವ ನಮನದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ .ಕೆ.ಅಡ್ವಾಣಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಸಚಿವ 
ದೇಶ

ಇಂದಿರಾ ಗಾಂಧಿಯವರ ಇಡೀ ವೃತ್ತಾಂತ ಹೇಳಲು ನಾನು ಮತ್ತೆ ಹುಟ್ಟಿ ಬರಬೇಕು: ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 99ನೇ ಜಯಂತಿ ಸಂದರ್ಭದಲ್ಲಿ ಅವರನ್ನು...

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 99ನೇ ಜಯಂತಿ ಸಂದರ್ಭದಲ್ಲಿ ಅವರನ್ನು ಕೊಂಡಾಡಿದ ಅವರ ಸೊಸೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ತಮ್ಮ ಅತ್ತೆಯವರ ಸಾಧನೆ, ಜೀವನದ ಬಗ್ಗೆ ವಿವರಿಸಲು ನಾನು ಅನೇಕ ಬಾರಿ ಹುಟ್ಟಿ ಬರಬೇಕು ಎಂದು ಹೇಳಿದರು.
ಇಂದಿರಾ ಗಾಂಧಿಯವರ ಇಡೀ ಕಥೆಯನ್ನು ಹೇಳಲು ನಾನು ಮತ್ತೆ ಮತ್ತೆ ಹುಟ್ಟಿಬರಬೇಕು, ಅಷ್ಟು ಇದೆ ಅವರ ಬಗ್ಗೆ ಹೇಳಲು ಎಂದು ಮಾಧ್ಯಮದವರಿಗೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದರು.
ಇಂದಿರಾ ಗಾಂಧಿ ಹುಟ್ಟಿದ್ದು 1917, ನವೆಂಬರ್ 19ರಂದು ಅಲಹಾಬಾದಿನಲ್ಲಿ. ಭಾರತದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಮತ್ತು ಕಮಲಾ ನೆಹರೂ ಅವರ ಏಕೈಕ ಪುತ್ರಿ ಇಂದಿರಾ.
ಅವರು ಭಾರತದ ಪ್ರಧಾನ ಮಂತ್ರಿಯಾಗಿ 1966ರಿಂದ 1977ರವರೆಗೆ ಮೊದಲ ಸಲ ಹಾಗೂ 1980ರಿಂದ ಅವರ ಹತ್ಯೆಯಾದ 1984ರವರೆಗೆ ಎರಡನೇ ಬಾರಿ ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿಯವರು ನಮ್ಮ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದಾರೆ.
ಇಂದಿರಾ ಗಾಂಧಿಯವರ ಜೀವನ ವೃತ್ತಾಂತಗಳಿಗೆ ಮೀಸಲಾದ ವೆಬ್ ಸೈಟ್ ವೊಂದನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಅನಾವರಣಗೊಳಿಸಿದರು. ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಆರಂಭಿಸಿರುವ ಈ ವೆಬ್ ಸೈಟ್ ನ್ನು ಇಂದಿರಾ ಗಾಂಧಿಯವರು ವಾಸಿಸುತ್ತಿದ್ದ ದೆಹಲಿಯ ಸಫ್ದರ್ಜಂಗ್ ನಲ್ಲಿನ ಅವರ ನಿವಾಸದಲ್ಲಿ ಬಿಡುಗಡೆ ಮಾಡಲಾಯಿತು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲಾದ ನಾಯಕರು ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT