ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜಯಂತಿ ಅಂಗವಾಗಿ ದೆಹಲಿಯಲ್ಲಿ ನಡೆದ ಗೌರವ ನಮನದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ .ಕೆ.ಅಡ್ವಾಣಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಸಚಿವ 
ದೇಶ

ಇಂದಿರಾ ಗಾಂಧಿಯವರ ಇಡೀ ವೃತ್ತಾಂತ ಹೇಳಲು ನಾನು ಮತ್ತೆ ಹುಟ್ಟಿ ಬರಬೇಕು: ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 99ನೇ ಜಯಂತಿ ಸಂದರ್ಭದಲ್ಲಿ ಅವರನ್ನು...

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 99ನೇ ಜಯಂತಿ ಸಂದರ್ಭದಲ್ಲಿ ಅವರನ್ನು ಕೊಂಡಾಡಿದ ಅವರ ಸೊಸೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ತಮ್ಮ ಅತ್ತೆಯವರ ಸಾಧನೆ, ಜೀವನದ ಬಗ್ಗೆ ವಿವರಿಸಲು ನಾನು ಅನೇಕ ಬಾರಿ ಹುಟ್ಟಿ ಬರಬೇಕು ಎಂದು ಹೇಳಿದರು.
ಇಂದಿರಾ ಗಾಂಧಿಯವರ ಇಡೀ ಕಥೆಯನ್ನು ಹೇಳಲು ನಾನು ಮತ್ತೆ ಮತ್ತೆ ಹುಟ್ಟಿಬರಬೇಕು, ಅಷ್ಟು ಇದೆ ಅವರ ಬಗ್ಗೆ ಹೇಳಲು ಎಂದು ಮಾಧ್ಯಮದವರಿಗೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದರು.
ಇಂದಿರಾ ಗಾಂಧಿ ಹುಟ್ಟಿದ್ದು 1917, ನವೆಂಬರ್ 19ರಂದು ಅಲಹಾಬಾದಿನಲ್ಲಿ. ಭಾರತದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಮತ್ತು ಕಮಲಾ ನೆಹರೂ ಅವರ ಏಕೈಕ ಪುತ್ರಿ ಇಂದಿರಾ.
ಅವರು ಭಾರತದ ಪ್ರಧಾನ ಮಂತ್ರಿಯಾಗಿ 1966ರಿಂದ 1977ರವರೆಗೆ ಮೊದಲ ಸಲ ಹಾಗೂ 1980ರಿಂದ ಅವರ ಹತ್ಯೆಯಾದ 1984ರವರೆಗೆ ಎರಡನೇ ಬಾರಿ ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿಯವರು ನಮ್ಮ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದಾರೆ.
ಇಂದಿರಾ ಗಾಂಧಿಯವರ ಜೀವನ ವೃತ್ತಾಂತಗಳಿಗೆ ಮೀಸಲಾದ ವೆಬ್ ಸೈಟ್ ವೊಂದನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಅನಾವರಣಗೊಳಿಸಿದರು. ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಆರಂಭಿಸಿರುವ ಈ ವೆಬ್ ಸೈಟ್ ನ್ನು ಇಂದಿರಾ ಗಾಂಧಿಯವರು ವಾಸಿಸುತ್ತಿದ್ದ ದೆಹಲಿಯ ಸಫ್ದರ್ಜಂಗ್ ನಲ್ಲಿನ ಅವರ ನಿವಾಸದಲ್ಲಿ ಬಿಡುಗಡೆ ಮಾಡಲಾಯಿತು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲಾದ ನಾಯಕರು ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT